AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸುವ ಜವಾಬ್ದಾರಿ ನನಗೆ ಹಾಗೂ ಹರ್ಷಗುಪ್ತಾಗೆ ಕೊಡಿ’

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯು ನಿಗದಿತ ದರಕ್ಕಿಂತ ಅಧಿಕವಾಗಿ ಬಿಲ್​ ನೀಡುತ್ತಿದೆ ಎಂದು ಟಿವಿ9 ವರದಿ ಮಾಡಿತ್ತು. ಇದನ್ನೂ ಓದಿ: ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo ಇದಕ್ಕೆ ಸ್ಪಂದಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. […]

‘ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸುವ ಜವಾಬ್ದಾರಿ ನನಗೆ ಹಾಗೂ ಹರ್ಷಗುಪ್ತಾಗೆ ಕೊಡಿ’
KUSHAL V
| Edited By: |

Updated on:Jul 31, 2020 | 12:25 AM

Share

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯು ನಿಗದಿತ ದರಕ್ಕಿಂತ ಅಧಿಕವಾಗಿ ಬಿಲ್​ ನೀಡುತ್ತಿದೆ ಎಂದು ಟಿವಿ9 ವರದಿ ಮಾಡಿತ್ತು.

ಇದನ್ನೂ ಓದಿ: ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo

ಇದಕ್ಕೆ ಸ್ಪಂದಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ಟ್ವೀಟ್​ ಮಾಡಿದ್ದರು.

ಜೊತೆಗೆ, ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆಯ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದುಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೀವಿ ಎಂದು ಸಹ ಹೇಳಿದ್ದರು.

ಇದೀಗ, ಸಚಿವರ ಟ್ವೀಟ್​ನ ಸಮರ್ಥನೆ ಮಾಡಿರುವ IPS ಅಧಿಕಾರಿ ಡಿ.ರೂಪಾ ಕೂಡ ಇದಕ್ಕೆ ಸಂಬಂಧಿಸಿ ಟ್ವೀಟ್​ ಮಾಡಿದ್ದಾರೆ. ನಗರದಲ್ಲಿ ಕೊವಿಡ್​ ನಿರ್ವಹಣೆಗಾಗಿ ನೇಮಕವಾಗಿರುವ ಅಧಿಕಾರಿಗಳ ತಂಡಕ್ಕೆ ಸೇರಿರುವ ರೂಪಾ ಅವರು, ಸಾರ್ ನನಗೆ ಹಾಗೂ ಐಎಎಸ್ ಹರ್ಷ ಗುಪ್ತಾ ಅವರಿಗೆ ಎಲ್ಲಾ ಆಸ್ಪತ್ರೆಗಳ ಮೇಲೆ ಈ ಜವಾಬ್ದಾರಿ ಕೊಟ್ಟರೆ, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸರಿಪಡಿಸಿದಂತೆ ಇದನ್ನೂ ನಿಭಾಯಿಸುತ್ತೇವೆ. Disaster management ಕಾಯ್ದೆ ಅಡಿ, ಸರ್ಕಾರ ದರ ನಿಗದಿಪಡಿಸಿದ ಆದೇಶದ ಉಲ್ಲಂಘನೆಯಾಗಿಎ ಎಂದು ಕೋರ್ಟ್ ಅನುಮತಿ ಪಡೆದು ಸಂಜ್ಞೆಯ ಅಪರಾಧದಂತೆ ತನಿಖೆ ಮಾಡಬಹುದು ಎಂದು ಟ್ವೀಟ್​ ಮಾಡಿದ್ದಾರೆ.

Published On - 6:28 pm, Wed, 29 July 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು