AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠಾಣೆ ಹೊರಗೆ ಗಾಯಾಳುವಿನ ನರಳಾಟ, ಠಾಣೆ ಒಳಗೆ ಸಿಬ್ಬಂದಿ‌ಯ ಕುಂಭಕರ್ಣ ನಿದ್ದೆ, ಯಾವೂರಲ್ಲಿ?

ಬೆಳಗಾವಿ: 2 ಕುಟುಂಬಗಳ ನಡುವಿನ ಗಲಾಟೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಗಾಯಗಳೊಂದಿಗೆ ದೂರು ನೀಡುವುದಕ್ಕೆ ಠಾಣೆಗೆ ವ್ಯಕ್ತಿ ಭೇಟಿ ನೀಡಿದ್ದಾನೆ. ಆದರೆ ತೀವ್ರ ನೋವಿನಿಂದ ಗಾಯಾಳು ಠಾಣೆಯ ಮುಂದೆ ನರಳಾಡುತ್ತಿದ್ದರೂ ಸಹ ಠಾಣಾ ಪೊಲೀಸರು ದೂರು ದಾಖಲಿಸಿಕೊಳ್ಳದೆ ನಿದ್ದೆ ಹೊಡೆಯುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಠಾಣೆಯಲ್ಲಿ ನೆಡೆದಿದೆ. ಅಕ್ಟೋಬರ್ 23ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ಫುಲ್​ ವೈರಲ್ ಆಗಿದೆ. ಕಳೆದ ತಿಂಗಳು 23ರಂದು ರಾಮದುರ್ಗ ತಾಲೂಕಿನ ಬುದ್ನಿ ಖುರ್ದ್ […]

ಠಾಣೆ ಹೊರಗೆ ಗಾಯಾಳುವಿನ ನರಳಾಟ, ಠಾಣೆ ಒಳಗೆ ಸಿಬ್ಬಂದಿ‌ಯ ಕುಂಭಕರ್ಣ ನಿದ್ದೆ, ಯಾವೂರಲ್ಲಿ?
ಪೃಥ್ವಿಶಂಕರ
|

Updated on: Nov 18, 2020 | 8:46 AM

Share

ಬೆಳಗಾವಿ: 2 ಕುಟುಂಬಗಳ ನಡುವಿನ ಗಲಾಟೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಗಾಯಗಳೊಂದಿಗೆ ದೂರು ನೀಡುವುದಕ್ಕೆ ಠಾಣೆಗೆ ವ್ಯಕ್ತಿ ಭೇಟಿ ನೀಡಿದ್ದಾನೆ. ಆದರೆ ತೀವ್ರ ನೋವಿನಿಂದ ಗಾಯಾಳು ಠಾಣೆಯ ಮುಂದೆ ನರಳಾಡುತ್ತಿದ್ದರೂ ಸಹ ಠಾಣಾ ಪೊಲೀಸರು ದೂರು ದಾಖಲಿಸಿಕೊಳ್ಳದೆ ನಿದ್ದೆ ಹೊಡೆಯುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಠಾಣೆಯಲ್ಲಿ ನೆಡೆದಿದೆ.

ಅಕ್ಟೋಬರ್ 23ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈಗ ಫುಲ್​ ವೈರಲ್ ಆಗಿದೆ. ಕಳೆದ ತಿಂಗಳು 23ರಂದು ರಾಮದುರ್ಗ ತಾಲೂಕಿನ ಬುದ್ನಿ ಖುರ್ದ್ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನೆಡೆದಿದೆ. ಮಾರಾಮಾರಿಯಲ್ಲಿ ಗ್ರಾಮದ ಮಾರುತಿ ಮಾದರ್ ಎಂಬುವವರಿಗೆ ತೀವ್ರ ಗಾಯಗಳಾಗಿವೆ. ಹೀಗಾಗಿ ಗಂಭೀರ ಗಾಯಗೊಂಡಿದ್ದ ಮಾರುತಿ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದಾರೆ.

ಆದರೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ದೂರು ದಾಖಲಿಸಿಕೊಳ್ಳದೇ‌ ಕಟಕೋಳ ಪೊಲೀಸರು ಬೇಜವಾಬ್ದಾರಿ ತೋರಿದ್ದಾರೆ ಎಂದು ಗಾಯಾಳು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಠಾಣೆ ಹೊರಗೆ ಗಾಯಾಳು ಬಿದ್ದು ಒದ್ದಾಡುತ್ತಿದ್ದರೆ ಠಾಣೆ ಒಳಗೆ ಸಿಬ್ಬಂದಿ‌ ನಿದ್ದೆ ಮಾಡುತ್ತಿದ್ದರು. ಜೊತೆಗೆ FIR ದಾಖಲಿಸಲು ವಿಳಂಬ ಮಾಡಿದರು ಎಂದು ಕಟಕೋಳ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಗಾಯಾಳು ಮಾರುತಿ ಮಾದರ್ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ