AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?

ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ಶ್ರದ್ಧಾ ಶೆಟ್ಟರ್‌ ಸಕ್ರಿಯರಾಗಿದ್ದಾರೆ. ಮೊನ್ನೆಯಷ್ಟೇ ಅಮಿತ್ ಶಾ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಈಗ ಇದರ ಬೆನ್ನಲ್ಲೇ ಶ್ರದ್ಧಾ ಆಕ್ಟೀವ್ ಆಗಿದ್ದಾರೆ.

ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?
ಶ್ರದ್ಧಾ ಶೆಟ್ಟರ್‌
ಆಯೇಷಾ ಬಾನು
| Edited By: |

Updated on: Jan 19, 2021 | 2:38 PM

Share

ಬೆಳಗಾವಿ: ತಂದೆ ಸುರೇಶ್ ಅಂಗಡಿ ನಿಧನದ ಬಳಿಕ ಇದೇ ಮೊದಲ ಬಾರಿಗೆ ಅವರ ಕಿರಿಯ ಪುತ್ರಿ, ಸಚಿವ ಜಗದೀಶ್ ಶೆಟ್ಟರ್ ಸೊಸೆಯೂ ಆಗಿರುವ ಶ್ರದ್ಧಾ ಶೆಟ್ಟರ್‌ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದು ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೇ ವೇಳೆ, ದಿವಂಗತ ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ಸಿಗುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ಶ್ರದ್ಧಾ ಶೆಟ್ಟರ್‌ ಸಕ್ರಿಯರಾಗಿದ್ದಾರೆ. ಮೊನ್ನೆಯಷ್ಟೇ ಅಮಿತ್ ಶಾ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಈಗ ಇದರ ಬೆನ್ನಲ್ಲೇ ಶ್ರದ್ಧಾ ಆಕ್ಟೀವ್ ಆಗಿದ್ದಾರೆ. ನಿನ್ನೆ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ಬಳಿಕ‌ ಐತಿಹಾಸಿಕ ರಾಜಹಂಸಗಡ ಕೋಟೆಗೂ ಭೇಟಿ ನೀಡಿ ಕೋಟೆಯ ಆವರಣದಲ್ಲಿರುವ ಸಿದ್ದೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದು ಫೇಸ್‌ಬುಕ್‌ನಲ್ಲಿ ಫೋಟೋ ಪೋಸ್ಟ್ ಮಾಡಿಕೊಂಡಿದ್ದಾರೆ.

ತಂದೆ ನಿಧನದ ನಂತರ ಡಿಸೆಂಬರ್ 25ರಂದು ಮೊದಲ ಬಾರಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಭೆಯಲ್ಲಿ ಭಾಗಿಯಾಗಿ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಶ್ರದ್ಧಾ ಶೆಟ್ಟರ್ ಸಂಚಾರ ಹಿನ್ನೆಲೆಯಲ್ಲಿ ಟಿಕೆಟ್ ನೀಡಲು ಹೈಕಮಾಂಡ್ ಹಸಿರು ನಿಶಾನೆ ನೀಡಿತಾ ಎಂಬ ಬಗ್ಗೆ ಚರ್ಚೆಗಳು ಗರಿಗೆದರಿವೆ.

ಸುರೇಶ್ ಅಂಗಡಿ ಬದುಕಿದ್ರೆ 2-3 ತಿಂಗಳಲ್ಲಿ ದೊಡ್ಡ, ವಿಚಿತ್ರ ಹುದ್ದೆ ಸಿಗ್ತಿತ್ತು -ಸಚಿವ ರಮೇಶ್ ಬಾಂಬ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ