AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast ಗಣಿ ಸ್ಫೋಟ ಪ್ರಕರಣಕ್ಕೆ ಸಿಕ್ಕಿದೆ ಬಿಗ್ ಟ್ವಿಸ್ಟ್.. ಎಸ್ಕೇಪ್ ಆಗಿದ್ದಾನಾ ಸ್ಫೋಟ ಪ್ರಕರಣದ ಕಿಂಗ್​ಪಿನ್?

ಶಿವಮೊಗ್ಗದ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಟೋರಿಯಸ್ ಎಸ್ಕೇಪ್ ಆಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಭದ್ರಾವತಿ ನಿವಾಸಿ ಕರಿಗೌಡ ಎಂಬುವವನ ಮೇಲೆ ಪೊಲೀಸರಿಗೆ ಅನುಮಾನ ಶುರುವಾಗಿದೆ. ಪ್ರವೀಣ್ ಎಂಬುವವನ ಮೂಲಕ ಕರಿಗೌಡ ಸ್ಫೋಟಕ ಸಪ್ಲೈ ಮಾಡ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

Shivamogga Blast ಗಣಿ ಸ್ಫೋಟ ಪ್ರಕರಣಕ್ಕೆ ಸಿಕ್ಕಿದೆ ಬಿಗ್ ಟ್ವಿಸ್ಟ್.. ಎಸ್ಕೇಪ್ ಆಗಿದ್ದಾನಾ ಸ್ಫೋಟ ಪ್ರಕರಣದ ಕಿಂಗ್​ಪಿನ್?
ಜಿಲೆಟಿನ್ ಸ್ಫೋಟಗೊಂಡ ಸ್ಥಳ
ಆಯೇಷಾ ಬಾನು
|

Updated on: Jan 25, 2021 | 8:39 AM

Share

ಶಿವಮೊಗ್ಗ: ಜಿಲ್ಲೆಯ ಗಣಿ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ಫೋಟ ಪ್ರಕರಣದ ಕಿಂಗ್​ಪಿನ್ ಎಸ್ಕೇಪ್ ಆಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಆ ಒಬ್ಬ ವ್ಯಕ್ತಿ ಸಿಕ್ಕರೆ ಎಲ್ಲವೂ ಬಯಲಾಗಲಿದೆ. ಸದ್ಯ ಎಸ್ಕೇಪ್ ಆಗಿರುವ ಕಿಂಗ್​ಪಿನ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಶಿವಮೊಗ್ಗದ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಟೋರಿಯಸ್ ಎಸ್ಕೇಪ್ ಆಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಭದ್ರಾವತಿ ನಿವಾಸಿ ಕರಿಗೌಡ ಎಂಬುವವನ ಮೇಲೆ ಪೊಲೀಸರಿಗೆ ಅನುಮಾನ ಶುರುವಾಗಿದೆ. ಪ್ರವೀಣ್ ಎಂಬುವವನ ಮೂಲಕ ಕರಿಗೌಡ ಸ್ಫೋಟಕ ಸಪ್ಲೈ ಮಾಡ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಭದ್ರಾವತಿಯಲ್ಲಿ ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿ ಬಳಿಕ ಅಲ್ಲಿಂದ ಸಪ್ಲೈ ಮಾಡಲಾಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ. ಆದರೆ ಈ ಬಗ್ಗೆ ಇನ್ನು ಸ್ಪಷ್ಟ ಆಧಾರಗಳು ಸಿಕ್ಕಿಲ್ಲ. ಕರಿಗೌಡ ನಾಪತ್ತೆಯಾಗಿದ್ದು ಆತ ಎಲ್ಲಿದ್ದಾನೆ ಎಂಬ ಮಾಹಿತಿ ಸಿಗುತ್ತಿಲ್ಲ. ಹೀಗಾಗಿ ಕರಿಗೌಡ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನು ವ್ಯವಹಾರದ ಸಂಬಂಧ ಹಿನ್ನೆಲೆಯಲ್ಲಿ ಕರಿಗೌಡ, ಪ್ರವೀಣ್​ಗೆ ₹2 ಲಕ್ಷ ಹಣ ನೀಡಿದ್ದನಂತೆ. ಅಲ್ಲದೆ ಸ್ಫೋಟ ಸಂಭವಿಸಿದ ಜಾಗದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದವು. ಸ್ಫೋಟದ ತೀವ್ರತೆಗೆ 2000 ಮುಖಬೆಲೆ ನೋಟುಗಳು ಚೆಲ್ಲಾಪಿಲ್ಲಿಯಾಗಿದ್ದವು. ಹೀಗಾಗಿ ಪ್ರವೀಣ್ ಸ್ಫೋಟಗೊಂಡ ಲಾರಿಯಲಗಲಿದ್ದನಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಜೊತೆಗೆ ಲಾರಿಯಲ್ಲಿದ್ದ ಶಶಿ ಎಂಬುವವನು ಕೂದಲೆಳೆ ಅಂತರದಲ್ಲಿ ಜೀವ ಉಳಿಸಿಕೊಂಡಿದ್ದು ಎಸ್ಕೇಪ್ ಆಗಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಫೋಟಕ್ಕೂ ಕೆಲ ಕ್ಷಣಗಳ ಹಿಂದೆ ಶಶಿ ಹೊರಗೆ ಹೋಗಿದ್ದನಂತೆ. ಅಲ್ಲದೆ ಶಶಿ ಜತೆಗಿದ್ದ ನಾಗರಾಜ್, ಪುನೀತ್ ಸುಳಿವು ಸಹ ಇನ್ನೂ ಸಿಕ್ಕಿಲ್ಲ.

Shivamogga Blast ಘಟನೆಯಲ್ಲಿ 6 ಮಂದಿ ಸಾವು, 6ನೇ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಹರಸಾಹಸ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು