AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾಜಿ […]

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ
KUSHAL V
|

Updated on: Sep 21, 2020 | 8:09 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾಜಿ ಕ್ರಿಕೆಟಿಗ NC ಅಯ್ಯಪ್ಪ ಹಾಗೂ ಕಿರುತೆರೆ ನಟಿ ರಶ್ಮಿ ಚಂಗಪ್ಪರ ವಿಚಾರಣೆಯನ್ನು ISD ಅಧಿಕಾರಿಗಳು ಸೆಪ್ಟೆಂಬರ್ 19ರಂದು ನಡೆಸಿರುವ ಮಾಹಿತಿ ಸಿಕ್ಕಿದೆ. ವಿಚಾರಣೆ ವೇಳೆ ನಾನು ಅಂಡರ್ 19 ತಂಡದ ಕೋಚ್ ಮತ್ತು ಬ್ಯಾಂಕ್ ಉದ್ಯೋಗಿ. ನನಗೆ ಅಂಥ ಯಾರ ಸಂಪರ್ಕವೂ ಇಲ್ಲ ಎಂದು ಅಯ್ಯಪ್ಪ ಹೇಳಿದ್ದಾರಂತೆ. ಹಾಗಾಗಿ, ಅಯ್ಯಪ್ಪರ ಹೇಳಿಕೆ ದಾಖಲಿಸಿ ISD ಅಧಿಕಾರಿಗಳು ವಾಪಾಸ್ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಜೊತೆಗೆ, ಇಂದು ನಟ ಯೋಗೀಶ್ ಹಾಗೂ ಖಾಸಗಿ ವಾಹಿನಿಯೊಂದರಅಸೋಸಿಯೇಟೆಡ್​ ಪ್ರೊಡ್ಯೂಸರ್ ನಿಶ್ಚಿತಾ ಶರತ್​ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ನಾನೊಬ್ಬ ನಟ. ನನಗೆ ಡ್ರಗ್ ಪೆಡ್ಲರ್​ಗಳ ಸಂಪರ್ಕವಿಲ್ಲ ಎಂದು ನಟ ಯೋಗೀಶ್ ಹೇಳಿದ್ದಾರಂತೆ.

ಇದಲ್ಲದೆ, ಮತ್ತಿಬ್ಬರಿಗೆ ನಾಳೆ ವಿಚಾರಣೆಗೆ ಹಾಜರಾಗಲು ISDಯಿಂದ ನೋಟಿಸ್ ಸಹ ಹೊರಡಿಸಲಾಗಿದೆ. ಅಭಿಷೇಕ್ ಹಾಗೂ ಕಿರುತೆರೆ ನಟಿ ಗೀತಾ ಭಾರತಿ ಭಟ್​ಗೆ ನೋಟಿಸ್ ನೀಡಲಾಗಿದ್ದು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ