AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO Opportunities: ಇಸ್ರೋದಲ್ಲಿ ವಿದ್ಯಾರ್ಥಿಗಳಿಗೆ ಆಕಾಶದೆತ್ತರಕ್ಕೂ ಇದೆ ಅವಕಾಶಗಳು, ಬಳಸಿಕೊಳ್ಳುವುದು ಹೇಗೆ?

ವಿಶ್ವಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ತಂದಿರುವ ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋ. ಈ ಅತ್ಯುತ್ತಮ ಬಾಹ್ಯಾಕಾಶ ಸಂಸ್ಥೆಯನ್ನು ಸೇರಿ ಸೇವೆ ಸಲ್ಲಿಸಬೇಕೆಂಬ ಕನಸು ಕಾಣುತ್ತಿರುವ ಕೋಟ್ಯಂತರ ವಿದ್ಯಾರ್ಥಿಗಳಿದ್ದಾರೆ. ಆದರೆ ಆ ಕನಸು ನನಸಾಗುವುದು ಸುಲಭವಲ್ಲ, ಹಾಗೆಂದು ಅಸಾಧ್ಯವೂ ಅಲ್ಲ. ಇಸ್ರೋ ಸ್ವತಃ ಪ್ರತಿಭಾವಂತರನ್ನು ಗುರುತಿಸುವ, ಪ್ರತಿಭಾವಂತರನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಅದರ ಬಗ್ಗೆ ಇಲ್ಲಿದೆ ಮಾಹಿತಿ.

ISRO Opportunities: ಇಸ್ರೋದಲ್ಲಿ ವಿದ್ಯಾರ್ಥಿಗಳಿಗೆ ಆಕಾಶದೆತ್ತರಕ್ಕೂ ಇದೆ ಅವಕಾಶಗಳು, ಬಳಸಿಕೊಳ್ಳುವುದು ಹೇಗೆ?
ಮಂಜುನಾಥ ಸಿ.
|

Updated on:May 02, 2024 | 2:05 PM

Share

ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ. ಭಾರತವನ್ನು ವಿಶ್ವದ ಶಕ್ತಿಯುತ ರಾಷ್ಟ್ರಗಳಲ್ಲಿ ಒಂದಾಗುವಂತೆ ಮಾಡುವಲ್ಲಿ ಇಸ್ರೋದ ಕಾಣಿಕೆ ದೊಡ್ಡದು. ರಾಷ್ಟ್ರವೊಂದರ ಸಾಮರ್ಥ್ಯವನ್ನು ಅದರ ಬಾಹ್ಯಾಕಾಶ ಸಂಶೋಧನೆಗಳು, ಬಾಹ್ಯಾಕಾಶ ಸಾಧನೆಗಳ ಮೂಲಕ ಅಳೆಯಲಾಗುತ್ತಿರುವ ಈ ಕಾಲಘಟ್ಟದಲ್ಲಿ ಇಸ್ರೋ ಭಾರತಕ್ಕೆ ಸತತ ಕೀರ್ತಿಯನ್ನು ತರುತ್ತಲೇ ಇದೆ. ಇಂಥಹಾ ಅತ್ಯುನ್ನತ ಸಂಸ್ಥೆಯ ಭಾಗವಾಗುವುದು ಭಾರತದ ಕೋಟ್ಯಂತರ ಯುವಕರ, ವಿದ್ಯಾರ್ಥಿಗಳ ಕನಸು. ಆದರೆ ಆ ಕನಸು ನನಸಾಗುವುದು ಸುಲಭವಲ್ಲ, ಹಾಗೆಂದು ಅಸಾಧ್ಯವೂ ಅಲ್ಲ. ಸ್ವತಃ ಇಸ್ರೋ ಪ್ರತಿಭಾವಂತರನ್ನು ಹೆಕ್ಕಿಕೊಳ್ಳುವ ಜೊತೆಗೆ ಪ್ರತಿಭಾವಂತರನ್ನು ಸೃಷ್ಟಿಸುವ ಕಾರ್ಯವನ್ನೂ ಮಾಡುತ್ತಲೇ ಬಂದಿದೆ. ಭವಿಷ್ಯದ ವಿಜ್ಞಾನಿಗಳನ್ನು ತಯಾರಿಸಲು ಇಸ್ರೋ ಹಲವು ಕಾರ್ಯಕ್ರಮಗಳನ್ನು ಕಾಲ-ಕಾಲಕ್ಕೆ ನಡೆಸುತ್ತದೆ. ಇಲ್ಲಿದೆ ಅದರ ಮಾಹಿತಿ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಹಾಗೂ ಯುವ ವಿಜ್ಞಾನಿಗಳನ್ನು ತಯಾರಿಸುವ ನಿಟ್ಟಿನಲ್ಲಿ ‘ಯುವಿಕಾ’ (YUVIKA) ಎಂಬ ಕಾರ್ಯಕ್ರಮವನ್ನು ಇಸ್ರೋ ಪ್ರಾರಂಭ ಮಾಡಿ ನಡೆಸಿಕೊಂಡು ಬರುತ್ತಿದೆ. ದೇಶದ 28 ರಾಜ್ಯ, ಎಂಟು ಕೇಂದ್ರಾಡಳಿತ ಪ್ರದೇಶಗಳ ಅರ್ಹ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ ಒಂದು ತಿಂಗಳ ಕಾಲ. ಇಸ್ರೋನ ಪ್ರಮುಖ ವಿಜ್ಞಾನಿಗಳು ವಿವಿಧ ವಿಭಾಗಗಳ ಬಗ್ಗೆ ಉಪನ್ಯಾಸ, ತರಬೇತಿ, ವಿಷಯ ಪ್ರಾತ್ಯಕ್ಷತೆಗಳನ್ನು ನೀಡುತ್ತಾರೆ. ಯುವಿಕಾ ಕಾರ್ಯಕ್ರಮಕ್ಕೆ ಒಂಬತ್ತನೇ ತರಗತಿ ವಿದ್ಯಾರ್ಥಿಗಳು ಮಾತ್ರವೇ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಇಸ್ರೋ ನಡೆಸುವ ಪರೀಕ್ಷೆ ಎದುರಿಸಿ ಉತ್ತೀರ್ಣಗೊಂಡ ನಂತರ ನಡೆವ ಸಂದರ್ಶನದಲ್ಲಿ ಪಾಸ್ ಆದವರಷ್ಟೆ ಈ ಒಂದು ತಿಂಗಳ ಕಾರ್ಯಕ್ರಮಕ್ಕೆ ಪ್ರವೇಶ ಗಿಟ್ಟಿಸುತ್ತಾರೆ. 2024ನೇ ಸಾಲಿನ ಯುವಿಕಾ ಕಾರ್ಯಕ್ರಮಕ್ಕೆ 353 ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ. ಇದರಲ್ಲಿ ಕರ್ನಾಟಕದ 11 ವಿದ್ಯಾರ್ಥಿಗಳು ಆಯ್ಕೆ...

Published On - 2:34 pm, Tue, 30 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ