AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​​ ನೀಡಿದ ಐಟಿ ದಿಗ್ಗಜ HCL!

ಡಿಜಿಟಲ್​ ಸೇವೆಗಳ ಬಳಕೆ ಹೆಚ್ಚುತ್ತಿದೆ. ಹೀಗಾಗಿ, ಐಟಿ ಕಂಪೆನಿಗಳಿಗೆ ಕೆಲಸ ಹೆಚ್ಚಿದೆ. ಅಲ್ಲದೆ, ಎಚ್​​ಸಿಎಲ್​ ಲಾಭ ಕೂಡ ಹೆಚ್ಚುತ್ತಿದೆ. ಹೀಗಾಗಿ, ಸಂಸ್ಥೆ 20 ಸಾವಿರ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದೆ.

ಕೆಲಸ ಹುಡುಕುತ್ತಿರುವವರಿಗೆ ಗುಡ್​ ನ್ಯೂಸ್​​ ನೀಡಿದ ಐಟಿ ದಿಗ್ಗಜ HCL!
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Jan 15, 2021 | 10:35 PM

ನವದೆಹಲಿ: ಕೊರೊನಾ ವೈರಸ್ ಕಾಣಿಸಿಕೊಂಡ ನಂತರ ಬಹುತೇಕ ಕ್ಷೇತ್ರಗಳ ಗಳಿಕೆ ಇಳಿಕೆ ಹಾದಿ ಹಿಡಿದರೆ, ಐಟಿ ಕ್ಷೇತ್ರ ಮಾತ್ರ ಏಳ್ಗೆ ಕಂಡಿವೆ. ಸಾಕಷ್ಟು ಐಟಿ ಕಂಪೆನಿಗಳು ಕೊರೊನಾ ಮಧ್ಯೆಯೂ ಲಾಭ ಮಾಡಿಕೊಂಡಿವೆ. ಈ ಬೆನ್ನಲ್ಲೇ ಐಟಿ ಕಂಪೆನಿಗಳು ದೊಡ್ಡ ಮಟ್ಟದಲ್ಲಿ ನೌಕರರನ್ನು ತೆಗೆದುಕೊಳ್ಳಲು ಮುಂದಾಗಿವೆ. ಐಟಿ ದಿಗ್ಗಜ ಎಚ್​​ಸಿಎಲ್​ ಟೆಕ್ನಾಲಜಿ ಆರು ತಿಂಗಳಲ್ಲಿ 20 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಗುರಿ ಹೊಂದಿದೆ.

ಡಿಜಿಟಲ್​ ಸೇವೆಗಳ ಬಳಕೆ ಹೆಚ್ಚುತ್ತಿದೆ. ಹೀಗಾಗಿ, ಐಟಿ ಕ್ಷೇತ್ರಕ್ಕೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಎಚ್​​ಸಿಎಲ್​ ಲಾಭ ಕೂಡ ಹೆಚ್ಚುತ್ತಿದೆ. ಹೀಗಾಗಿ, ಎಚ್​​ಸಿಎಲ್​ ಈ ನಿರ್ಧಾರಕ್ಕೆ ಬಂದಿದೆ. ಎಚ್​​ಸಿಎಲ್​ನಲ್ಲಿ ಸದ್ಯ 1.59 ಲಕ್ಷ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

ಮೂರನೇ ತ್ರೈ ಮಾಸಿಕದಲ್ಲಿ ನಾವು 6,500 ಉದ್ಯೋಗಿಗಳನ್ನು ಸಂಸ್ಥೆಗೆ ಸೇರ್ಪಡೆ ಮಾಡಿಕೊಂಡಿದ್ದೇವೆ. ಕೆಲಸಕ್ಕೆ ಬೇಡಿಕೆ ಹೆಚ್ಚುತ್ತಿದ್ದು ಹೀಗಾಗಿ, ಹೊಸಬರು ಹಾಗೂ ಅನುಭವಿಗಳನ್ನು ಸಂಸ್ಥೆಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಮುಂದಿನ 4-6 ತಿಂಗಳಲ್ಲಿ 20 ಸಾವಿರ ನೌಕರರನ್ನು ತೆಗೆದುಕೊಳ್ಳುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಎಚ್​ಸಿಎಲ್​ ಟೆಕ್ನಾಲಜಿ ಅಧ್ಯಕ್ಷ ಹಾಗೂ ಮುಖ್ಯಸ್ಥ ವಿಜಯ್​ಕುಮಾರ್ ಹೇಳಿದ್ದಾರೆ.

ಕಳೆದ ಕೆಲ ತಿಂಗಳಿಂದ ಎಚ್​ಸಿಎಲ್​ ಶ್ರೀಲಂಕಾ ಹಾಗೂ ವಿಯೆಟ್ನಾಂನಲ್ಲಿ ಹೂಡಿಕೆ ಮಾಡುತ್ತಿದೆ. ಕಳೆದ ಜೂನ್​ ತಿಂಗಳಲ್ಲಿ ಎಚ್​ಸಿಎಲ್​ ಶ್ರೀಲಂಕಾದಲ್ಲಿ ತನ್ನ ಶಾಖೆ ಆರಂಭಿಸಿದ್ದು, ಸ್ಥಳೀಯ 1500 ಮಂದಿಗೆ ಉದ್ಯೋಗ ಒದಗಿಸುವ ಗುರಿಯನ್ನು ಸಂಸ್ಥೆ ಹೊಂದಿದೆ.

IT ಉದ್ಯಮ ಬೆಳಗಲು ಏನೆಲ್ಲಾ ಆಗಬೇಕು; ಟಿವಿ9 ಸಂವಾದದಲ್ಲಿ ಮೋಹನ್​ದಾಸ್​ ಪೈ

Published On - 10:32 pm, Fri, 15 January 21

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ