AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ

ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್​ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್​ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #IncomeTaxRaid ಹ್ಯಾಷ್​ಟ್ಯಾಗ್​ಗಳು ಟ್ವಿಟರ್​ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ.

ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ
ಅನುರಾಗ್​ ಕಶ್ಯಪ್​ ಮತ್ತು ತಾಪ್ಸೀ ಪನ್ನು
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 04, 2021 | 9:00 PM

Share

ದೆಹಲಿ: ಬಾಲಿವುಡ್​ನ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ₹ 350 ಕೋಟಿ ಮೊತ್ತದ ಅವ್ಯವಹಾರ ಪತ್ತೆ ಮಾಡಿದ್ದಾರೆ. ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್​ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್​ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #IncomeTaxRaid ಹ್ಯಾಷ್​ಟ್ಯಾಗ್​ಗಳು ಟ್ವಿಟರ್​ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ. ಸಾಕಷ್ಟು ಜನರು ತೆರಿಗೆ ವಂಚನೆಯನ್ನು ಟೀಕಿಸಿದ್ದಾರೆ.

ಸಿನಿಮಾಗಳ ಬಾಕ್ಸ್​ ಆಫೀಸ್​ ಸಂಗ್ರಹದ ಕೇವಲ ಶೇ 2ರಷ್ಟು ಮೊತ್ತವನ್ನು ಮಾತ್ರವೇ ಆದಾಯವಾಗಿ ಘೋಷಿಸಿದ್ದಾರೆ. ₹ 20 ಕೋಟಿ ಮೊತ್ತದಷ್ಟು ಬೋಗಸ್ ಖರ್ಚಿನ ದಾಖಲೆಗಳು ಪತ್ತೆಯಾಗಿವೆ. ಇಬ್ಬರನ್ನೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.

ಫಾಂಟಾಮ್ ಫಿಲ್ಸ್ಮ್​ ಕಂಪನಿಯ ಷೇರು ವಹಿವಾಟಿನ ಮಾಹಿತಿಯನ್ನು ತಿದ್ದಿರುವ, ಮೌಲ್ಯವನ್ನು ತಪ್ಪಾಗಿ ದಾಖಲಿಸಿರುವ ದಾಖಲೆಗಳು ಪತ್ತೆಯಾಗಿವೆ. ₹ 350 ಕೋಟಿ ಮೊತ್ತದಷ್ಟು ತೆರಿಗೆ ಬಾಧ್ಯತೆ ಇವರ ಮೇಲಿದೆ. ತಪ್ಸಿ ಪನ್ನು ಅವರು ₹ 5 ಕೋಟಿಯಷ್ಟು ತೆರಿಗೆ ಬಾಧ್ಯತೆ ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫಾಂಟಾಮ್ ಫಿಲ್ಮ್ಸ್​ನ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಲು ಮುಂಬೈ ಮತ್ತು ಪುಣೆಯ 28 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ರಿಲಯನ್ಸ್​ ಎಂಟರ್​ಟೈನ್​ಮೆಂಟ್​ ಸಮೂಹದ ಸಿಇಒ ಶಿಬಶೀಷ್ ಸರ್ಕಾರ್ ಮತ್ತು KWAN, ಎಕ್ಸೀಡ್ ಟ್ಯಾಲೆಂಟ್ ಮ್ಯಾನೇಜ್​ಮೆಂಟ್​ ಕಂಪನಿಗಳ ಮೇಲೆಯೂ ದಾಳಿ ನಡೆದಿತ್ತು. ದಾಳಿಯ ವೇಳೆ ಪತ್ತೆಯಾದ 7 ಬ್ಯಾಂಕ್​ ಲಾಕರ್​ಗಳ ಬಳಕೆ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!