AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ

ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್​ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್​ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #IncomeTaxRaid ಹ್ಯಾಷ್​ಟ್ಯಾಗ್​ಗಳು ಟ್ವಿಟರ್​ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ.

ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಮನೆಗಳ ಐಟಿ ದಾಳಿ ವೇಳೆ ₹ 350 ಕೋಟಿ ತೆರಿಗೆ ವಂಚನೆ ಪತ್ತೆ
ಅನುರಾಗ್​ ಕಶ್ಯಪ್​ ಮತ್ತು ತಾಪ್ಸೀ ಪನ್ನು
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 04, 2021 | 9:00 PM

Share

ದೆಹಲಿ: ಬಾಲಿವುಡ್​ನ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ₹ 350 ಕೋಟಿ ಮೊತ್ತದ ಅವ್ಯವಹಾರ ಪತ್ತೆ ಮಾಡಿದ್ದಾರೆ. ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್​ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್​ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #IncomeTaxRaid ಹ್ಯಾಷ್​ಟ್ಯಾಗ್​ಗಳು ಟ್ವಿಟರ್​ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ. ಸಾಕಷ್ಟು ಜನರು ತೆರಿಗೆ ವಂಚನೆಯನ್ನು ಟೀಕಿಸಿದ್ದಾರೆ.

ಸಿನಿಮಾಗಳ ಬಾಕ್ಸ್​ ಆಫೀಸ್​ ಸಂಗ್ರಹದ ಕೇವಲ ಶೇ 2ರಷ್ಟು ಮೊತ್ತವನ್ನು ಮಾತ್ರವೇ ಆದಾಯವಾಗಿ ಘೋಷಿಸಿದ್ದಾರೆ. ₹ 20 ಕೋಟಿ ಮೊತ್ತದಷ್ಟು ಬೋಗಸ್ ಖರ್ಚಿನ ದಾಖಲೆಗಳು ಪತ್ತೆಯಾಗಿವೆ. ಇಬ್ಬರನ್ನೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.

ಫಾಂಟಾಮ್ ಫಿಲ್ಸ್ಮ್​ ಕಂಪನಿಯ ಷೇರು ವಹಿವಾಟಿನ ಮಾಹಿತಿಯನ್ನು ತಿದ್ದಿರುವ, ಮೌಲ್ಯವನ್ನು ತಪ್ಪಾಗಿ ದಾಖಲಿಸಿರುವ ದಾಖಲೆಗಳು ಪತ್ತೆಯಾಗಿವೆ. ₹ 350 ಕೋಟಿ ಮೊತ್ತದಷ್ಟು ತೆರಿಗೆ ಬಾಧ್ಯತೆ ಇವರ ಮೇಲಿದೆ. ತಪ್ಸಿ ಪನ್ನು ಅವರು ₹ 5 ಕೋಟಿಯಷ್ಟು ತೆರಿಗೆ ಬಾಧ್ಯತೆ ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫಾಂಟಾಮ್ ಫಿಲ್ಮ್ಸ್​ನ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಲು ಮುಂಬೈ ಮತ್ತು ಪುಣೆಯ 28 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ರಿಲಯನ್ಸ್​ ಎಂಟರ್​ಟೈನ್​ಮೆಂಟ್​ ಸಮೂಹದ ಸಿಇಒ ಶಿಬಶೀಷ್ ಸರ್ಕಾರ್ ಮತ್ತು KWAN, ಎಕ್ಸೀಡ್ ಟ್ಯಾಲೆಂಟ್ ಮ್ಯಾನೇಜ್​ಮೆಂಟ್​ ಕಂಪನಿಗಳ ಮೇಲೆಯೂ ದಾಳಿ ನಡೆದಿತ್ತು. ದಾಳಿಯ ವೇಳೆ ಪತ್ತೆಯಾದ 7 ಬ್ಯಾಂಕ್​ ಲಾಕರ್​ಗಳ ಬಳಕೆ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ