ವಿಕ್ಟೋರಿಯಾ ಆಸ್ಪತ್ರೆ ಮುಂದೆ ಜನ ಜಮಾವಣೆ.. ಇಂದೇ ಬಿಡುಗಡೆ ಆಗ್ತಾರಾ ವಿ.ಕೆ. ಶಶಿಕಲಾ?

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಆದ್ರೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಶಶಿಕಲಾ ನಟರಾಜನ್, ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಶಿಕಲಾರನ್ನು ನೋಡುವ ತವಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಅವರ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಮುಂದೆ ಜನ ಜಮಾವಣೆ.. ಇಂದೇ ಬಿಡುಗಡೆ ಆಗ್ತಾರಾ ವಿ.ಕೆ. ಶಶಿಕಲಾ?
ವಿ.ಕೆ.ಶಶಿಕಲಾ ನಟರಾಜನ್
ಸಾಧು ಶ್ರೀನಾಥ್​ Edited By:

Updated on: Feb 10, 2021 | 3:05 PM

ಬೆಂಗಳೂರು: ಸುಮಾರು 4 ವರ್ಷಗಳ ಜೈಲು ಶಿಕ್ಷೆ ಬಳಿಕ ವಿ.ಕೆ. ಶಶಿಕಲಾ ಇಂದು ಜೈಲುವಾಸದಿಂದ ರಿಲೀಸ್ ಆಗುವ ಸಾದ್ಯತೆಗಳು ಹೆಚ್ಚಾಗಿವೆ. ಕಾನೂನಾತ್ಮಕವಾಗಿ ಶಶಿಕಲಾ ಬಿಡುಗಡೆಯಾಗಬಹದಾದರೂ ಆರೋಗ್ಯದಿಂದಾಗಿ ಅವರಿನ್ನೂ ಆಸ್ಪತ್ರೆಯಲ್ಲೇ ಉಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.

ಹೌದು, ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ, ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಬೇಕಿದೆ. ಆದ್ರೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಶಶಿಕಲಾ ನಟರಾಜನ್, ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ, ತಮ್ಮ ಅಧಿನಾಯಕಿ ಶಶಿಕಲಾರನ್ನು ನೋಡುವ ತವಕದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಂದೆ ಅವರ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳು ಜಮಾವಣೆ ಹಿನ್ನೆಲೆ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಅಕ್ರಮ ಆಸ್ತಿ ಗಳಿಗೆ ಕೇಸ್​ನಲ್ಲಿ 4 ವರ್ಷ ಶಿಕ್ಷೆ ಅನುಭವಿಸಿದ ಶಶಿಕಲಾಗೆ ಜೈಲುವಾಸ ಅಂತ್ಯ, ಕೊರೊನಾ ಚಿಕಿತ್ಸೆ ಬಳಿಕ ರಿಲೀಸ್ ಆಗಲಿದ್ದಾರಾ ಚಿನ್ನಮ್ಮ?

Published On - 10:55 am, Wed, 27 January 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us