AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದಾರೆ.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
TV9 Web
| Edited By: |

Updated on:Aug 04, 2021 | 9:40 AM

Share

ಬಾಗಲಕೋಟೆ: ಪುನರ್ವಸತಿ ಕೇಂದ್ರ ಜಾಗ ತೆರವಿಗೆ ವಿರೋಧ ವ್ಯಕ್ತಪಡಿಸಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನಮಂದಿರದ ಜೈನಮುನಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಲುಗಳಿಂದ ನಿರ್ಮಿಸಿದ ಗುಂಪಾದಲ್ಲಿ ಕೂತು ಜೈನಮುನಿ ಶಾಂತಿಧರ್ಮಭೂಷಣ ಮಹಾರಾಜರು ಪ್ರತಿಭಟನೆಗೆ ಮುಂದಾಗಿದ್ದಾರೆ.

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದು. ನಿನ್ನೆ ಮದ್ಯಾಹ್ನದಿಂದಲೇ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲೂ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕೂಡ ಭಾಗಿಯಾಗಿದ್ದಾರೆ.

ಇಂದು‌ ಜಾಗದಲ್ಲಿನ ಗಿಡಗಳನ್ನು ತೆರವುಗೊಳಿಸಿ ಜಾಗದ ಅಳತೆ ಮಾಡಲು‌ ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಜಾಗದಲ್ಲಿ ಯಾವುದೇ ತೆರವು ಕಾರ್ಯ, ಯಾವುದೇ ಚಟುವಟಿಕೆ ನಡೆಸದಂತೆ ಹಳಿಂಗಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದ್ದಲ ಗಲಾಟೆ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ಇನ್ನು ಪ್ರತಿಭಟಾನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ. ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಒತ್ತಾಯಿಸಿದ್ದು ಪೊಲೀಸರಿಗೆ ಕೇರ್ ಮಾಡದೆ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾಕಾರರನ್ನು ಬಂಧಿಸಿ ಡಿಎಆರ್ ವಾಹನಕ್ಕೆ ಹಾಕಿಕೊಂಡು ಪೊಲೀಸರು ಹೊರಟಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ನಿರ್ಮಾಣವಾಗಿದೆ. ಜಾಗ ಶುಚಿಗೊಳಿಸಲು ಕಂದಾಯ ಇಲಾಖೆ ಸಿಬ್ಬಂದಿ ಆಗಮಿಸಿದ್ದ ವೇಳೆ ಸೀಮೆಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Lovlina Borgohain: ಊರಿನ ಭವಿಷ್ಯ ಬದಲಿಸಿದ ಆ ಒಂದು ಗೆಲುವು: ದಶಕಗಳಿಂದ ಅಭಿವೃದ್ದಿ ಕಾಣದ ಲವ್ಲಿನಾ ಹಳ್ಳಿಗೆ ಹೊಸ ರಸ್ತೆ ನಿರ್ಮಾಣ

Published On - 8:04 am, Wed, 4 August 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ