AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದಾರೆ.

ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
ಪುನರ್ವಸತಿ ಕೇಂದ್ರ ಜಾಗ ತೆರವು ವಿರೋಧಿಸಿ ಹಳಿಂಗಳಿ ಗ್ರಾಮಸ್ಥರು, ಜೈನಮುನಿಗಳಿಂದ ಪ್ರತಿಭಟನೆ
TV9 Web
| Edited By: |

Updated on:Aug 04, 2021 | 9:40 AM

Share

ಬಾಗಲಕೋಟೆ: ಪುನರ್ವಸತಿ ಕೇಂದ್ರ ಜಾಗ ತೆರವಿಗೆ ವಿರೋಧ ವ್ಯಕ್ತಪಡಿಸಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನಮಂದಿರದ ಜೈನಮುನಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಲುಗಳಿಂದ ನಿರ್ಮಿಸಿದ ಗುಂಪಾದಲ್ಲಿ ಕೂತು ಜೈನಮುನಿ ಶಾಂತಿಧರ್ಮಭೂಷಣ ಮಹಾರಾಜರು ಪ್ರತಿಭಟನೆಗೆ ಮುಂದಾಗಿದ್ದಾರೆ.

ತಮದಡ್ಡಿ ಹಾಗೂ ಹಳಿಂಗಳಿ ಗ್ರಾಮಸ್ಥರ ಮಧ್ಯೆ ಒಂದೇ ಜಾಗಕ್ಕಾಗಿ ಹೋರಾಟ ನಡೆಯುತ್ತಿದೆ. ತಮದಡ್ಡಿ ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರಕ್ಕೆ ಜಾಗ ನೀಡಲು ಅಧಿಕಾರಿಗಳು ತಿಳಿಸಿದ್ದಾರೆ. ಈ‌ ಜಾಗ ಬಿಟ್ಟು ಬೇರೆ ಕಡೆ ಕೊಡಿ ಎಂದು‌ ಹಳಿಂಗಳಿ ಗ್ರಾಮಸ್ಥರು, ಭದ್ರಗಿರಿ ಜೈನಮಂದಿರದ ಭಕ್ತರು ಹಾಗೂ‌ ಮುನಿಗಳು ಒತ್ತಾಯಿಸಿದ್ದು. ನಿನ್ನೆ ಮದ್ಯಾಹ್ನದಿಂದಲೇ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲೂ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕೂಡ ಭಾಗಿಯಾಗಿದ್ದಾರೆ.

ಇಂದು‌ ಜಾಗದಲ್ಲಿನ ಗಿಡಗಳನ್ನು ತೆರವುಗೊಳಿಸಿ ಜಾಗದ ಅಳತೆ ಮಾಡಲು‌ ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಜಾಗದಲ್ಲಿ ಯಾವುದೇ ತೆರವು ಕಾರ್ಯ, ಯಾವುದೇ ಚಟುವಟಿಕೆ ನಡೆಸದಂತೆ ಹಳಿಂಗಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದ್ದಲ ಗಲಾಟೆ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ಇನ್ನು ಪ್ರತಿಭಟಾನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ. ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಒತ್ತಾಯಿಸಿದ್ದು ಪೊಲೀಸರಿಗೆ ಕೇರ್ ಮಾಡದೆ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾಕಾರರನ್ನು ಬಂಧಿಸಿ ಡಿಎಆರ್ ವಾಹನಕ್ಕೆ ಹಾಕಿಕೊಂಡು ಪೊಲೀಸರು ಹೊರಟಿದ್ದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ‌ ನಿರ್ಮಾಣವಾಗಿದೆ. ಜಾಗ ಶುಚಿಗೊಳಿಸಲು ಕಂದಾಯ ಇಲಾಖೆ ಸಿಬ್ಬಂದಿ ಆಗಮಿಸಿದ್ದ ವೇಳೆ ಸೀಮೆಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Lovlina Borgohain: ಊರಿನ ಭವಿಷ್ಯ ಬದಲಿಸಿದ ಆ ಒಂದು ಗೆಲುವು: ದಶಕಗಳಿಂದ ಅಭಿವೃದ್ದಿ ಕಾಣದ ಲವ್ಲಿನಾ ಹಳ್ಳಿಗೆ ಹೊಸ ರಸ್ತೆ ನಿರ್ಮಾಣ

Published On - 8:04 am, Wed, 4 August 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು