AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಕೇವಲ 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಮುಕ್ತಾಯ

ಮೈಸೂರು: ಕಿಲ್ಲರ್ ಕೊರೊನಾದಿಂದಾಗಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ 25 ಅಂದ್ರೆ ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಕ್ಷಣಗಣನೆ ಶುರುವಾಗಿದೆ. ಕೊರೊನಾ ಭೀತಿಯಿಂದಾಗಿ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದೆ. ಪ್ರತಿ ವರ್ಷ 5.5 ಕಿ.ಮೀ.ಸಾಗುತ್ತಿದ್ದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ಕೇವಲ 400 ಮೀಟರ್ ಅಂತರದಲ್ಲೇ ಅಂತ್ಯವಾಗಲಿದ್ದು, 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಪೂರ್ಣಗೊಳ್ಳಲಿದೆ. ನಾಳೆ ಮಧ್ಯಾಹ್ನ 2:59 ರಿಂದ […]

ಈ ಬಾರಿ ಕೇವಲ 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಮುಕ್ತಾಯ
ಆಯೇಷಾ ಬಾನು
|

Updated on: Oct 25, 2020 | 3:43 PM

Share

ಮೈಸೂರು: ಕಿಲ್ಲರ್ ಕೊರೊನಾದಿಂದಾಗಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ 25 ಅಂದ್ರೆ ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಕ್ಷಣಗಣನೆ ಶುರುವಾಗಿದೆ. ಕೊರೊನಾ ಭೀತಿಯಿಂದಾಗಿ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದೆ.

ಪ್ರತಿ ವರ್ಷ 5.5 ಕಿ.ಮೀ.ಸಾಗುತ್ತಿದ್ದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ಕೇವಲ 400 ಮೀಟರ್ ಅಂತರದಲ್ಲೇ ಅಂತ್ಯವಾಗಲಿದ್ದು, 30 ರಿಂದ 40 ನಿಮಿಷಗಳಲ್ಲೇ ಜಂಬೂ ಸವಾರಿ ಪೂರ್ಣಗೊಳ್ಳಲಿದೆ. ನಾಳೆ ಮಧ್ಯಾಹ್ನ 2:59 ರಿಂದ 3:20 ರೊಳಗಿನ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಬಳಿಕ 3:40 ರಿಂದ 4:15 ರೊಳಗಿನ ಶುಭ ಕುಂಭ ಲಗ್ನದಲ್ಲಿ ಅಭಿಮನ್ಯುವಿನ ಬೆನ್ನಿನ ಮೇಲೆ ಚಿನ್ನದ ಅಂಬಾರಿಯನಿಟ್ಟು ಅದರಲ್ಲಿ ‌ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ಮಾಡಲಾಗುತ್ತೆ. ನಾಳಿನ ಜಂಬೂ ಸವಾರಿಯಲ್ಲಿ 4 ಕಲಾತಂಡ, ಅಶ್ವಾರೋಹಿ ದಳದ 2 ತುಕಡಿ, 2 ಸ್ತಬ್ದ ಚಿತ್ರ, ಕರ್ನಾಟಕ ಪೊಲೀಸ್ ವಾಹನದ ಆನೆಗಾಡಿ ಸಾಗಲಿದೆ. ಹೀಗಾಗಿ ಮೈಸೂರು ಅರಮನೆ ಆವರಣದಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿವೆ.

ಪ್ರತಿ ವರ್ಷ ಲಕ್ಷಾಂತರ ಮಂದಿ ಈ ಭವ್ಯ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದೆರ ಈ ಬಾರಿ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಕೇವಲ 300 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಮೈಸೂರು ಅರಮನೆಯ ಸುತ್ತಮುತ್ತ ಜನಜಂಗುಳಿ ಉಂಟಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ