AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಎದುರಾಯ್ತು.. ಮತ್ತದೇ ಕಂಟಕ

ಬಳ್ಳಾರಿ: ಜಿಲ್ಲೆಯಲ್ಲಿರುವ ಕರ್ನಾಟಕ-ಆಂಧ್ರ ಅಂತರರಾಜ್ಯ ಗಡಿ ಗುರುತನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ನಾಶಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಸರ್ವೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಸರ್ವೆ ಆಫ್ ಇಂಡಿಯಾದಿಂದ ಸರ್ವೆ ಕಾರ್ಯ ನಡೆಸಲಾಗುತ್ತಿದೆ. 17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರ್ವೆ ನಡೆಯುತ್ತಿದೆ. OMC ಗಣಿ ಕಂಪನಿ ವಿರುದ್ಧ ಗಡಿ ಗುರುತು ನಾಶ ಪಡಿಸಿರುವ ಆರೋಪ ಕೇಳಿಬಂದಿದ್ದು ಮಾಜಿ […]

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಎದುರಾಯ್ತು.. ಮತ್ತದೇ ಕಂಟಕ
KUSHAL V
| Edited By: |

Updated on: Oct 19, 2020 | 11:27 AM

Share

ಬಳ್ಳಾರಿ: ಜಿಲ್ಲೆಯಲ್ಲಿರುವ ಕರ್ನಾಟಕ-ಆಂಧ್ರ ಅಂತರರಾಜ್ಯ ಗಡಿ ಗುರುತನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ನಾಶಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಸರ್ವೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ಸರ್ವೆ ಆಫ್ ಇಂಡಿಯಾದಿಂದ ಸರ್ವೆ ಕಾರ್ಯ ನಡೆಸಲಾಗುತ್ತಿದೆ. 17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸರ್ವೆ ನಡೆಯುತ್ತಿದೆ. OMC ಗಣಿ ಕಂಪನಿ ವಿರುದ್ಧ ಗಡಿ ಗುರುತು ನಾಶ ಪಡಿಸಿರುವ ಆರೋಪ ಕೇಳಿಬಂದಿದ್ದು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿ ಇದಾಗಿದೆ.