AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

ಈಗ ಕ್ಯೋಟೋ ವಿಶ್ವವಿದ್ಯಾಲಯ ಮತ್ತು ಸುಮಿಟೋಮೊ ಅರಣ್ಯ ತಜ್ಞರು ಆಲ್ಯೂಮಿನಿಯಂ ಬದಲಾಗಿ ಮರವನ್ನು ಬಳಕೆ ಮಾಡಲು ಚಿಂತನೆ ನಡೆಸಿದ್ದಾರೆ. ಇದು ಪರಿಸರ ಸ್ನೆಹಿ ಕೃತಕ ಉಪಗ್ರಹವಾಗಿರಲಿದೆ.

ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 3:21 PM

Share

ಟೊಕಿಯೋ: ಲೋಹಗಳನ್ನು ಬಳಕೆ ಮಾಡಿ ಕೃತಕ ಉಪಗ್ರಹ ಸಿದ್ಧಪಡಿಸೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಮರದ ಸ್ಯಾಟಲೈಟ್​ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ತಂತ್ರಜ್ಞಾನದಲ್ಲಿ ಮುಂದಿರುವ ಜಪಾನ್​ ಹೀಗೊಂದು ಪ್ರಯೋಗಕ್ಕೆ ಮುಂದಾಗಿದೆ. 2023ರ ವೇಳೆಗೆ ಮರದ ಸ್ಯಾಟಲೈಟ್ ಜಪಾನ್​ ನೆಲದಿಂದ​ ಗಗನಕ್ಕೆ ಚಿಮ್ಮಲಿದೆ.

ಈಗ ಸಿದ್ಧಪಡಿಸುತ್ತಿರುವ ಸ್ಯಾಟಲೈಟ್​ನಲ್ಲಿ ಆಲ್ಯೂಮಿನಿಯಂ ಲೋಹವನ್ನು ಹೆಚ್ಚು ಬಳಕೆ ಮಾಡಲಾಗುತ್ತದೆ. ಈ ಕಾರಣಕ್ಕೆ ಕೃತಕ ಉಪಗ್ರಹ ಕಡಿಮೆ ಭಾರ ಇರುತ್ತದೆ. ಅಲ್ಲದೆ, ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಆದರೆ, ಈ ರೀತಿಯ ಉಪಗ್ರಹ ವಿಭಜನೆಯಾದಾಗ ಆಲ್ಯೂಮಿನಿಯಂ ಕಣಗಳು ಬಿಡುಗಡೆ ಆಗುತ್ತವೆ. ಇದು ಅನೇಕ ವರ್ಷಗಳ ಕಾಲ ವಾತಾವರಣದಲ್ಲೇ ಇರುತ್ತದೆ. ಕೆಲವೊಮ್ಮೆ ರಿಯಾಕ್ಷನ್​ ಉಂಟಾಗಿ, ಓಜೋನ್​ ಪದರ​ ಹಾಳಾಗುವ ಸಾಧ್ಯತೆ ಇರುತ್ತದೆ.

ಈಗ ಕ್ಯೋಟೋ ವಿಶ್ವವಿದ್ಯಾಲಯ ಮತ್ತು ಸುಮಿಟೋಮೊ ಅರಣ್ಯ ತಜ್ಞರು ಆಲ್ಯೂಮಿನಿಯಂ ಬದಲಾಗಿ ಮರವನ್ನು ಬಳಕೆ ಮಾಡಲು ಚಿಂತನೆ ನಡೆಸಿದ್ದಾರೆ. ಇದು ಪರಿಸರ ಸ್ನೆಹಿ ಕೃತಕ ಉಪಗ್ರಹವಾಗಿರಲಿದೆ. ಈ ಉಪಗ್ರಹ ಆಗಸಕ್ಕೆ ಚಿಮ್ಮುವಾಗ ಮರದ ಭಾಗ ಸಂಪೂರ್ಣ ಸುಟ್ಟು ಭಸ್ಮವಾಗುತ್ತದೆ. ಇದರಿಂದ ಸ್ಯಾಟಲೈಟ್​ನ ಯಾವುದೇ ಕಣ ವಾತಾವರಣಕ್ಕೆ ಸೇರುವುದಿಲ್ಲ.

ಈಗಾಗಲೇ ಕ್ಯೋಟೋ ವಿಶ್ವವಿದ್ಯಾಲಯ ಮತ್ತು ಸುಮಿಟೋಮೊ ಅರಣ್ಯ ತಜ್ಞರು ಸಂಶೋಧನೆ ಆರಂಭಿಸಿದ್ದಾರೆ. ಸ್ಯಾಟಲೈಟ್​ಗೆ ಯಾವ ಮರ ಬಳಕೆ ಮಾಡಿದರೆ ಉತ್ತಮ ಎನ್ನುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯುತ್ತಿವೆ.

ಅಮೆಜಾನ್ ಮಳೆಕಾಡಿನ ಮೇಲೆ ಚೀನಾ, ಬ್ರೆಜಿಲ್ ಸ್ಯಾಟಲೈಟ್ ನಿಗಾ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್