AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ 200 ಕೋಟಿ ರೂಪಾಯಿ ಸಮೀಪಿಸಿದ ‘ಜವಾನ್’ ಸಿನಿಮಾ ಕಲೆಕ್ಷನ್

‘ಜವಾನ್’ ಸಿನಿಮಾಗೆ ಭಾನುವಾರವೂ ಒಳ್ಳೆಯ ಬುಕಿಂಗ್ ಆಗುತ್ತಿದೆ. ಶನಿವಾರವೇ ಸಿನಿಮಾ ಈ ಮಟ್ಟದಲ್ಲಿ ಗಳಿಕೆ ಮಾಡಿದೆ ಎಂದರೆ ಭಾನುವಾರ ಯಾವ ರೀತಿಯಲ್ಲಿ ಕಮಾಯಿ ಮಾಡಬಹುದು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿದೆ. ಇನ್ನು, ‘ಜವಾನ್’ ಸಿನಿಮಾ ಅಬ್ಬರದಿಂದ ‘ಗದರ್ 2’ ಸಿನಿಮಾದ ಗಳಿಕೆಯಲ್ಲಿ ಇಳಿಕೆ ಕಂಡಿದೆ.

ಮೂರೇ ದಿನಕ್ಕೆ 200 ಕೋಟಿ ರೂಪಾಯಿ ಸಮೀಪಿಸಿದ ‘ಜವಾನ್’ ಸಿನಿಮಾ ಕಲೆಕ್ಷನ್
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 10, 2023 | 7:38 AM

Share

‘ಜವಾನ್’ ಸಿನಿಮಾ (Jawan Movie) ಸೆಪ್ಟೆಂಬರ್ 7ರಂದು ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಶಾರುಖ್ ಖಾನ್ ಅವರು ತಾವೇ ಮಾಡಿದ ದಾಖಲೆಗಳನ್ನು ಸರಿಗಟ್ಟುತ್ತಿದ್ದಾರೆ. ‘ಜವಾನ್’ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟಾಗಬಹುದು ಎನ್ನುವ ಕುತೂಹಲ ಮೂಡಿದೆ. ಸದ್ಯ ಈ ಸಿನಿಮಾ ಹೋಗುತ್ತಿರುವ ವೇಗ ನೋಡಿದರೆ ಚಿತ್ರ ಹಲವು ದಾಖಲೆಗಳನ್ನು ಬರೆಯೋದು ಪಕ್ಕಾ ಎನ್ನಲಾಗುತ್ತಿದೆ. ಮೂರೇ ದಿನಕ್ಕೆ ಚಿತ್ರದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ. ಶನಿವಾರ (ಸೆಪ್ಟೆಂಬರ್ 9) ಈ ಚಿತ್ರ ಭರ್ಜರಿ ಕಮಾಯಿ ಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಜವಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ಆ್ಯಕ್ಷನ್ ಮೆರೆದಿದ್ದಾರೆ. ಈ ಚಿತ್ರದ ಮೂಲಕ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ತಮ್ಮದೇ ಸಂಸ್ಥೆ ‘ರೆಡ್ ಚಿಲ್ಲೀಸ್’ ಮೂಲಕ ಸಿನಿಮಾ ನಿರ್ಮಾಣ ಮಾಡಿರುವುದರಿಂದ ಅವರಿಗೆ ಭರ್ಜರಿ ಲಾಭ ಆಗುತ್ತಿದೆ. ಮೊದಲ ದಿನ ಸಿನಿಮಾ ಹಿಂದಿ ವರ್ಷನ್​ನಿಂದ 65 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 50 ಕೋಟಿ ರೂಪಾಯಿ ಗಳಿಸಿತ್ತು. ಮೂರನೇ ದಿನ ಚಿತ್ರಕ್ಕೆ 60+ ಕೋಟಿ ರೂಪಾಯಿ ಕಮಾಯಿ ಆಗಿದೆ. ಈ ಮೂಲಕ 175+ ಕೋಟಿ ರೂಪಾಯಿ ಗಳಿಕೆ ಆಗಿದೆ. ಇದೇ ರೀತಿ ಮುಂದುವರೆದರೆ ಸಿನಿಮಾ ಶೀಘ್ರವೇ 300 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

‘ಜವಾನ್’ ಸಿನಿಮಾಗೆ ಭಾನುವಾರವೂ ಒಳ್ಳೆಯ ಬುಕಿಂಗ್ ಆಗುತ್ತಿದೆ. ಶನಿವಾರವೇ ಸಿನಿಮಾ ಈ ಮಟ್ಟದಲ್ಲಿ ಗಳಿಕೆ ಮಾಡಿದೆ ಎಂದರೆ ಭಾನುವಾರ ಯಾವ ರೀತಿಯಲ್ಲಿ ಕಮಾಯಿ ಮಾಡಬಹುದು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿದೆ. ಇನ್ನು, ‘ಜವಾನ್’ ಸಿನಿಮಾ ಅಬ್ಬರದಿಂದ ‘ಗದರ್ 2’ ಸಿನಿಮಾದ ಗಳಿಕೆಯಲ್ಲಿ ಇಳಿಕೆ ಕಂಡಿದೆ.

ಇದನ್ನೂ ಓದಿ: 80ರ ದಶಕದ ಈ ಸಿನಿಮಾದ ರಿಮೇಕ್ ‘ಜವಾನ್’? ಆ ಚಿತ್ರದ ಕಥೆಯೂ ಹೀಗೆಯೇ ಇದೆ

‘ಜವಾನ್’ ಸಿನಿಮಾ ತಮಿಳು ಚಿತ್ರ ‘ತಾಯಿ ನಾಡು’ ಚಿತ್ರದ ರಿಮೇಕ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಎರಡೂ ಸಿನಿಮಾದ ಕಥೆಗೆ ಸಾಮ್ಯತೆ ಇದೆ. ಈ ಕಾರಣದಿಂದ ಈ ಹೋಲಿಕೆ ನಡೆದಿದೆ. ಆದರೆ, ಶಾರುಖ್ ಖಾನ್ ಅಭಿಮಾನಿಗಳು ಇದನ್ನು ಒಪ್ಪುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ