Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ

ಜೆಡಿಎಸ್‌ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ 21 ನಾಯಕರನ್ನೊಳಗೊಂಡ ನೂತನ ಕೋರ್‌ ಕಮಿಟಿ ರಚನೆ ಮಾಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅಧ್ಯಕ್ಷರಾಗಿದ್ದು, ವೈಎಸ್​ವಿ ದತ್ತಾ ಸಂಚಾಲಕರಾಗಿದ್ದಾರೆ. ಹಾಗಾದ್ರೆ, ಕಮಿಟಿಯ ಸದಸ್ಯರು ಯಾರ್ಯಾರು ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ
ಜೆಡಿಎಸ್​ ಕೋರ್​ ಕಮಿಟಿ
Follow us
Sunil MH
| Updated By: ರಮೇಶ್ ಬಿ. ಜವಳಗೇರಾ

Updated on: Aug 18, 2023 | 3:19 PM

ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್​ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್​ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್​ ಕೋರ್​ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್​​ ಕೋರ್​ ಕಮಿಟಿ ಸಂಚಾಲಕರಾಗಿ ವೈಎಸ್​​ವಿ ದತ್ತಾ ಆಯ್ಕೆಯಾಗಿದ್ದಾರೆ. ಇನ್ನು ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪುರ, ಹೆಚ್.ಕೆ‌‌.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ‌.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ S.ಪಾಟೀಲ್, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನ ಕುಮಾರ್, ಸುನಿತಾ ಚೌಹಾಣ್​​, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ JDS ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಮುಂದಿನ ರಾಜಕೀಯ ಭವಿಷ್ಯದಿಂದ ಯಾವುದೇ ಮೈತ್ರಿಕೂಟ ಸೇರದಿರಲು ಜೆಡಿಎಸ್​ ನಿರ್ಧಾರ

ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಗೆಲ್ಲಲು ಜೆಡಿಎಸ್​ ವಿಫಲವಾಗಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ​ ಹಾಗೂ ಕಾಂಗ್ರೆಸ್​ನಷ್ಟು ಸೀಟು ಗೆಲ್ಲದಿದ್ದರೂ ಪರವಾಗಿಲ್ಲ. ಕನಿಷ್ಠ ಪಕ್ಷ ಅತಂತ್ರವಾಗಿ ಕಿಂಗ್ ಮೇಕರ್​ ಸ್ಥಾನದಲ್ಲಿ ಕೂಡಬೇಕೆನ್ನುವ ಕನಸ್ಸು ಜೆಡಿಎಸ್​ ಕಂಡಿತ್ತು. ಆದ್ರೆ, ಲೆಕ್ಕಾಚಾರ ಬದಲಾಗಿದ್ದು, ಕಾಂಗ್ರೆಸ್​ ಬಹುಮತದೊಂದಿಗೆ ಅಧಿಕಾರಿಕ್ಕೇರಿದೆ. ಇದರಿಂದ ಜೆಡಿಎಸ್ ಕನಸು ನುಚ್ಚುನೂರಾಗಿದೆ.

ಈ ಮೊದಲು ಬಿಜೆಪಿ ಜೊತೆ ಮೈತ್ರಿಗೆ (JDS-BJP Alliance) ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗಳು ನಡೆದಿದ್ದವು. ಸ್ವತಃ ಕುಮಾರಸ್ವಾಮಿ ಸಹ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲು ಉತ್ಸುಕರಾಗಿದ್ದರು. ಆದ್ರೆ, ಪಕ್ಷದ ಶಾಸಕರಿಂದ ಅಪಸ್ವರ ವ್ಯಕ್ತವಾಗಿದ್ದರಿಂದ ಸದ್ಯಕ್ಕೆ ಬಿಜೆಪಿಯೊಂದಿಗಿನ ಮೈತ್ರಿಯಿಂದ ಹಿಂದೆ ಸರಿದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ