AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ

ಜೆಡಿಎಸ್‌ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ 21 ನಾಯಕರನ್ನೊಳಗೊಂಡ ನೂತನ ಕೋರ್‌ ಕಮಿಟಿ ರಚನೆ ಮಾಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅಧ್ಯಕ್ಷರಾಗಿದ್ದು, ವೈಎಸ್​ವಿ ದತ್ತಾ ಸಂಚಾಲಕರಾಗಿದ್ದಾರೆ. ಹಾಗಾದ್ರೆ, ಕಮಿಟಿಯ ಸದಸ್ಯರು ಯಾರ್ಯಾರು ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ
ಜೆಡಿಎಸ್​ ಕೋರ್​ ಕಮಿಟಿ
ಸುನಿಲ್​ ಎಮ್​ ಹೆಚ್​
| Edited By: |

Updated on: Aug 18, 2023 | 3:19 PM

Share

ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್​ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್​ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್​ ಕೋರ್​ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್​​ ಕೋರ್​ ಕಮಿಟಿ ಸಂಚಾಲಕರಾಗಿ ವೈಎಸ್​​ವಿ ದತ್ತಾ ಆಯ್ಕೆಯಾಗಿದ್ದಾರೆ. ಇನ್ನು ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪುರ, ಹೆಚ್.ಕೆ‌‌.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ‌.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ S.ಪಾಟೀಲ್, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನ ಕುಮಾರ್, ಸುನಿತಾ ಚೌಹಾಣ್​​, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ JDS ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಮುಂದಿನ ರಾಜಕೀಯ ಭವಿಷ್ಯದಿಂದ ಯಾವುದೇ ಮೈತ್ರಿಕೂಟ ಸೇರದಿರಲು ಜೆಡಿಎಸ್​ ನಿರ್ಧಾರ

ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಗೆಲ್ಲಲು ಜೆಡಿಎಸ್​ ವಿಫಲವಾಗಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ​ ಹಾಗೂ ಕಾಂಗ್ರೆಸ್​ನಷ್ಟು ಸೀಟು ಗೆಲ್ಲದಿದ್ದರೂ ಪರವಾಗಿಲ್ಲ. ಕನಿಷ್ಠ ಪಕ್ಷ ಅತಂತ್ರವಾಗಿ ಕಿಂಗ್ ಮೇಕರ್​ ಸ್ಥಾನದಲ್ಲಿ ಕೂಡಬೇಕೆನ್ನುವ ಕನಸ್ಸು ಜೆಡಿಎಸ್​ ಕಂಡಿತ್ತು. ಆದ್ರೆ, ಲೆಕ್ಕಾಚಾರ ಬದಲಾಗಿದ್ದು, ಕಾಂಗ್ರೆಸ್​ ಬಹುಮತದೊಂದಿಗೆ ಅಧಿಕಾರಿಕ್ಕೇರಿದೆ. ಇದರಿಂದ ಜೆಡಿಎಸ್ ಕನಸು ನುಚ್ಚುನೂರಾಗಿದೆ.

ಈ ಮೊದಲು ಬಿಜೆಪಿ ಜೊತೆ ಮೈತ್ರಿಗೆ (JDS-BJP Alliance) ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗಳು ನಡೆದಿದ್ದವು. ಸ್ವತಃ ಕುಮಾರಸ್ವಾಮಿ ಸಹ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲು ಉತ್ಸುಕರಾಗಿದ್ದರು. ಆದ್ರೆ, ಪಕ್ಷದ ಶಾಸಕರಿಂದ ಅಪಸ್ವರ ವ್ಯಕ್ತವಾಗಿದ್ದರಿಂದ ಸದ್ಯಕ್ಕೆ ಬಿಜೆಪಿಯೊಂದಿಗಿನ ಮೈತ್ರಿಯಿಂದ ಹಿಂದೆ ಸರಿದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ