AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ

ಜೆಡಿಎಸ್‌ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ 21 ನಾಯಕರನ್ನೊಳಗೊಂಡ ನೂತನ ಕೋರ್‌ ಕಮಿಟಿ ರಚನೆ ಮಾಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅಧ್ಯಕ್ಷರಾಗಿದ್ದು, ವೈಎಸ್​ವಿ ದತ್ತಾ ಸಂಚಾಲಕರಾಗಿದ್ದಾರೆ. ಹಾಗಾದ್ರೆ, ಕಮಿಟಿಯ ಸದಸ್ಯರು ಯಾರ್ಯಾರು ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ
ಜೆಡಿಎಸ್​ ಕೋರ್​ ಕಮಿಟಿ
Sunil MH
| Updated By: ರಮೇಶ್ ಬಿ. ಜವಳಗೇರಾ|

Updated on: Aug 18, 2023 | 3:19 PM

Share

ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್​ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್​ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್​ ಕೋರ್​ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್​​ ಕೋರ್​ ಕಮಿಟಿ ಸಂಚಾಲಕರಾಗಿ ವೈಎಸ್​​ವಿ ದತ್ತಾ ಆಯ್ಕೆಯಾಗಿದ್ದಾರೆ. ಇನ್ನು ಸಾ.ರಾ.ಮಹೇಶ್, ಬಂಡೆಪ್ಪ ಕಾಶಂಪುರ, ಹೆಚ್.ಕೆ‌‌.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ‌.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ S.ಪಾಟೀಲ್, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನ ಕುಮಾರ್, ಸುನಿತಾ ಚೌಹಾಣ್​​, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ JDS ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಮುಂದಿನ ರಾಜಕೀಯ ಭವಿಷ್ಯದಿಂದ ಯಾವುದೇ ಮೈತ್ರಿಕೂಟ ಸೇರದಿರಲು ಜೆಡಿಎಸ್​ ನಿರ್ಧಾರ

ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಗೆಲ್ಲಲು ಜೆಡಿಎಸ್​ ವಿಫಲವಾಗಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ​ ಹಾಗೂ ಕಾಂಗ್ರೆಸ್​ನಷ್ಟು ಸೀಟು ಗೆಲ್ಲದಿದ್ದರೂ ಪರವಾಗಿಲ್ಲ. ಕನಿಷ್ಠ ಪಕ್ಷ ಅತಂತ್ರವಾಗಿ ಕಿಂಗ್ ಮೇಕರ್​ ಸ್ಥಾನದಲ್ಲಿ ಕೂಡಬೇಕೆನ್ನುವ ಕನಸ್ಸು ಜೆಡಿಎಸ್​ ಕಂಡಿತ್ತು. ಆದ್ರೆ, ಲೆಕ್ಕಾಚಾರ ಬದಲಾಗಿದ್ದು, ಕಾಂಗ್ರೆಸ್​ ಬಹುಮತದೊಂದಿಗೆ ಅಧಿಕಾರಿಕ್ಕೇರಿದೆ. ಇದರಿಂದ ಜೆಡಿಎಸ್ ಕನಸು ನುಚ್ಚುನೂರಾಗಿದೆ.

ಈ ಮೊದಲು ಬಿಜೆಪಿ ಜೊತೆ ಮೈತ್ರಿಗೆ (JDS-BJP Alliance) ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗಳು ನಡೆದಿದ್ದವು. ಸ್ವತಃ ಕುಮಾರಸ್ವಾಮಿ ಸಹ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲು ಉತ್ಸುಕರಾಗಿದ್ದರು. ಆದ್ರೆ, ಪಕ್ಷದ ಶಾಸಕರಿಂದ ಅಪಸ್ವರ ವ್ಯಕ್ತವಾಗಿದ್ದರಿಂದ ಸದ್ಯಕ್ಕೆ ಬಿಜೆಪಿಯೊಂದಿಗಿನ ಮೈತ್ರಿಯಿಂದ ಹಿಂದೆ ಸರಿದಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ