AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಕೊರೊನಾ ಸಂಕಷ್ಟಕ್ಕೆ ‘ನಾಟಿ’ ಮದ್ದು!

ಚಿಕ್ಕಮಗಳೂರು: ಇಷ್ಟು ದಿನ ನೆಮ್ಮದಿಯಿಂದ ಇದ್ದ ಕಾಫಿನಾಡಿನ ಜನರಿಗೆ ಇದೀಗ ಕೊರೊನಾ ಹೆಮ್ಮಾರಿಯ ಬಿಸಿ ತಟ್ಟಲು ಶುರುವಾಗಿದೆ. ಈ ನಡುವೆ ಜಿಲ್ಲೆಯಿಂದ ನೌಕರಿ ಅರಸಿ ಸಿಲಿಕಾನ್​ ಸಿಟಿ ಸೇರಿದ್ದ ಯುವಕರು ಇದೀಗ ಸೋಂಕಿನ ಭೀತಿಯಿಂದ ತಮ್ಮತಮ್ಮ ಗ್ರಾಮಗಳಗೆ ಮರಳಿದ್ದರು. ಇದಲ್ಲದೆ, ದೇಶಾದ್ಯಂತ ಘೋಷಿಸಲಾದ ಲಾಕ್​ಡೌನ್​ ತಂದೊಡ್ಡಿದ ಸಂಕಷ್ಟಗಳಿಂದ ಜಿಲ್ಲೆಯ ರೈತರು ಸಹ ಬೇಸತ್ತು ಹೋಗಿದ್ದರು. ಜೆಡಿಎಸ್ ಯುವ ಕಾರ್ಯಕರ್ತರ ವಿನೂತನ ಪ್ರಯತ್ನ ಹೀಗಾಗಿ, ಇವರಿಬ್ಬರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಜಿಲ್ಲೆಯ ಯುವ ಜೆಡಿಎಸ್ ಕಾರ್ಯಕರ್ತರು ಮುಂದಾದರು. ಆದ್ದರಿಂದ, ಇಂದು […]

ಕಾಫಿನಾಡಲ್ಲಿ ಕೊರೊನಾ ಸಂಕಷ್ಟಕ್ಕೆ ‘ನಾಟಿ’ ಮದ್ದು!
KUSHAL V
| Edited By: |

Updated on:Jul 24, 2020 | 3:07 PM

Share

ಚಿಕ್ಕಮಗಳೂರು: ಇಷ್ಟು ದಿನ ನೆಮ್ಮದಿಯಿಂದ ಇದ್ದ ಕಾಫಿನಾಡಿನ ಜನರಿಗೆ ಇದೀಗ ಕೊರೊನಾ ಹೆಮ್ಮಾರಿಯ ಬಿಸಿ ತಟ್ಟಲು ಶುರುವಾಗಿದೆ. ಈ ನಡುವೆ ಜಿಲ್ಲೆಯಿಂದ ನೌಕರಿ ಅರಸಿ ಸಿಲಿಕಾನ್​ ಸಿಟಿ ಸೇರಿದ್ದ ಯುವಕರು ಇದೀಗ ಸೋಂಕಿನ ಭೀತಿಯಿಂದ ತಮ್ಮತಮ್ಮ ಗ್ರಾಮಗಳಗೆ ಮರಳಿದ್ದರು. ಇದಲ್ಲದೆ, ದೇಶಾದ್ಯಂತ ಘೋಷಿಸಲಾದ ಲಾಕ್​ಡೌನ್​ ತಂದೊಡ್ಡಿದ ಸಂಕಷ್ಟಗಳಿಂದ ಜಿಲ್ಲೆಯ ರೈತರು ಸಹ ಬೇಸತ್ತು ಹೋಗಿದ್ದರು.

ಜೆಡಿಎಸ್ ಯುವ ಕಾರ್ಯಕರ್ತರ ವಿನೂತನ ಪ್ರಯತ್ನ ಹೀಗಾಗಿ, ಇವರಿಬ್ಬರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಜಿಲ್ಲೆಯ ಯುವ ಜೆಡಿಎಸ್ ಕಾರ್ಯಕರ್ತರು ಮುಂದಾದರು. ಆದ್ದರಿಂದ, ಇಂದು ಜೆಡಿಎಸ್ ಕಾರ್ಯಕರ್ತರು ಯುವಕರು ಮತ್ತು ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡುವ ಕಾರ್ಯಕ್ರಮವನ್ನ ಆಯೋಜಿಸಿದ್ದರು.

ಪಕ್ಷದ ಯುವ ಘಟಕದ ಜಿಲ್ಲಾಧ್ಯಕ್ಷ ವಿನಯ್ ರಾಜ್ ನೇತೃತ್ವದಲ್ಲಿ ಮೂಡಿಗೆರೆ ತಾಲೂಕಿನ ಪುರ ಗ್ರಾಮದಲ್ಲಿ ಈ ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಜೀವನೋಪಾಯದ ದಾರಿ ಕಳೆದುಕೊಂಡು ಊರು ಸೇರಿದ್ದ ಯುವಕರಿಗೆ ಹಾಗೂ ಲಾಕ್​ಡೌನ್​ನಿಂದ ನಷ್ಟ ಅನುಭವಿಸಿದ್ದ ರೈತರಿಗೆ ಸ್ಫೂರ್ತಿ ನೀಡಲು ಇದರ ಆಯೋಜನೆ ಮಾಡಲಾಗಿತ್ತು.

ಹಾಗಾಗಿ, ಸೋಂಕಿನ ಭೀತಿಗೆ ಸೆಡ್ಡು ಹೊಡೆದು ಹತ್ತಾರು ಯುವಕರು ಕಾರ್ಯಕರ್ತರೊಂದಿಗೆ ಸೇರಿ ಆನಂದದಿಂದ ಹಾಡುತ್ತಾ ಹುಮ್ಮಸ್ಸಿನಿಂದ ನಾಟಿ ಕೆಲಸದಲ್ಲಿ ಪಾಲ್ಗೊಂಡರು. ಪಕ್ಷದ ಯುವ ಕಾರ್ಯಕರ್ತರಿಗೆ ಮಾಜಿ ಸಚಿವ ಬಿ.ಬಿ ನಿಂಗಯ್ಯ, ಜಿಲ್ಲಾಧ್ಯಕ್ಷ ಹೊಲದಗದ್ದೆ ಗಿರೀಶ್ ಸೇರಿದಂತೆ ಇತರೆ ಸ್ಥಳೀಯರು ಸಾಥ್​ ನೀಡಿದರು.

Published On - 7:33 pm, Wed, 22 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು