AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ -ಮಂಡ್ಯ ಸೋಲನ್ನು ಮರೆಯದ ನಿಖಿಲ್ ಕುಮಾರಸ್ವಾಮಿ

ಕಳೆದ ಚುನಾವಣೆಯಲ್ಲಿ ಸೋತಿರೋದರ ಬಗ್ಗೆ ನಂಗೆ ಚಿಂತೆ ಇಲ್ಲ. ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ ಎಂದು ಜಿಲ್ಲೆಯ ಮಳವಳ್ಳಿಯಲ್ಲಿ JDS​ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ -ಮಂಡ್ಯ ಸೋಲನ್ನು ಮರೆಯದ ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
KUSHAL V
|

Updated on:Jan 17, 2021 | 4:42 PM

Share

ಮಂಡ್ಯ: ಕಳೆದ ಚುನಾವಣೆಯಲ್ಲಿ ಸೋತಿರೋದರ ಬಗ್ಗೆ ನಂಗೆ ಚಿಂತೆ ಇಲ್ಲ. ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ ಎಂದು ಜಿಲ್ಲೆಯ ಮಳವಳ್ಳಿಯಲ್ಲಿ JDS​ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ, ನಿಖಿಲ್ ತಮ್ಮ ಸೋಲಿನ ಅನುಭವವನ್ನು ಹಂಚಿಕೊಂಡಿದ್ದಾರೆ.

ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್​ ಜಿಲ್ಲೆಯ ಎಲ್ಲಾ ಶಾಸಕರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದ್ರು. ಅವರ ಅಭಿಪ್ರಾಯದ ಪ್ರಕಾರ ನಾನು ಚುನಾವಣೆಗೆ ನಿಂತೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋತ ಬಗ್ಗೆ ನಂಗೆ ಚಿಂತೆ ಇಲ್ಲ. ನೀವು ನಾನು ಗೆಲ್ಲುತ್ತೇನೆ ಅಂದುಕೊಂಡಿದ್ರಿ. ಆಗ ನನಗೆ ಜಿಲ್ಲೆಯ ಅಷ್ಟೊಂದು ಸಂಪರ್ಕವಿರಲಿಲ್ಲ. ಹಾಗಂತ, ನನ್ನ ವಿರುದ್ಧ ಚುನಾವಣೆಗೆ ನಿಂತಿದ್ದವರಿಗೂ ಸಹ ಜಿಲ್ಲೆಯ ಜನರ ಅಷ್ಟು ಸಂಪರ್ಕ ಇರಲಿಲ್ಲ. ಕೇವಲ ಕುಮಾರಣ್ಣನವರ ಶಕ್ತಿ ಕುಗ್ಗಿಸಲು ವಿರೋಧಿ ಬಣ ಸೃಷ್ಟಿಯಾದವು ಎಂದು ಸಂಸದೆ ಸುಮಲತಾ ಹೆಸರು ಹೇಳದೆ ನಿಖಿಲ್ ವಾಗ್ದಾಳಿ ನಡೆಸಿದರು.

ಎಲೆಕ್ಷನ್​ನಲ್ಲಿ ನಾನು ಸೋತರೂ ನನಗೆ ಬೇಸರವಿಲ್ಲ. ಚುನಾವಣೆಗೂ ಮೊದಲು ನನಗೆ ಮಂಡ್ಯ ಕ್ಷೇತ್ರದ ಜೊತೆ ಅಷ್ಟೊಂದು ಒಡನಾಟ ಇರಲಿಲ್ಲ. ನಾನು ಗೆದ್ದು ದೆಹಲಿಗೆ ಹೋಗಿ ಮೆರೆಯಬೇಕಿರಲಿಲ್ಲ. ಆದರೆ, ಆ ವಿಚಾರ ಈಗ ಮಾತನಾಡುವುದು ಬೇಡ ಎಂದು ಹೇಳುತ್ತಲೇ ತಮ್ಮ ಸೋಲಿನ ಬಗ್ಗೆ ನಿಖಿಲ್ ಮಾತನಾಡಿದರು.

ನಾನು ಏನೇ ಹೇಳಿದ್ರೂ RSSನವರು ವಿವಾದ ಮಾಡುತ್ತಾರೆ: ಸಿದ್ದರಾಮಯ್ಯ ಬೇಸರ

Published On - 4:29 pm, Sun, 17 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?