ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ. ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ […]

ಶಿರಾ ಬೈಎಲೆಕ್ಷನ್: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆಯಾಗಿದ್ದು ಹೀಗೆ..
ಸಾಧು ಶ್ರೀನಾಥ್​

Updated on: Oct 14, 2020 | 4:27 PM

ತುಮಕೂರು: ಜೆಡಿಎಸ್​ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಉಮೇದುವಾರಿಕೆ ಆಖೈರುಗೊಳಿಸಿದ ದಿನದಂದೇ ವೈಯಕ್ತಿವಾಗಿ ಅಮ್ಮಾಜಮ್ಮಗೆ ಮತ್ತು ಪಕ್ಷಕ್ಕೆ ಭಾರಿ ಹೊಡೆತವೊಂದು ಬಿದ್ದಿತ್ತು. ಚುನಾವಣೆ ಕಣದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದ್ದ ಅಮ್ಮಾಜಮ್ಮಗೆ ಮಹಾಮಾರಿ ಕೊರೊನಾ ಅಂಟಿಕೊಂಡಿತ್ತು. ಇದು ಚುನಾವಣಾ ಪ್ರಚಾರದ ಮೇಲೆ ಕರಿನೆರಳು ಬೀರಿದೆ.

ಕೊರೊನಾ ಕಾರಣಕ್ಕೆ ಅಮ್ಮಾಜಮ್ಮ ಹಾಜರಿಲ್ಲ
ಈ ಮಧ್ಯೆ, ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಅಮ್ಮಾಜಮ್ಮ ನಾಮಪತ್ರ ಸಲ್ಲಿಸುವುದಕ್ಕೆ ಮುಹೂರ್ತ ಕೂಡಿಬಂದಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅಭ್ಯರ್ಥಿ ಅಮ್ಮಾಜಮ್ಮ ಅವರು ಕ್ವಾರೆಂಟೈನ್​ನಿಂದ ಹೊರಬರುವಂತಿರಲಿಲ್ಲ. ಹಾಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಜೆಡಿಎಸ್ ನಾಯಕರು ಶಿರಾ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿಯ ಪರ ನಾಮಪತ್ರ ಸಲ್ಲಿಸಲು ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ರೇವಣ್ಣ, ಗೌರಿಶಂಕರ್, ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಹಲವರು ಆಗಮಿಸಿದ್ದರು. ಜೆಡಿಎಸ್ ನಾಯಕರು ಪಕ್ಷದ ಸಾವಿರಾರು ಕಾರ್ಯಕರ್ತರು ಜೊತೆಗೂಡಿ ಕೊನೆಗೂ ನಾಮಪತ್ರ ಸಲ್ಲಿಸಿದರು.

Published On - 3:16 pm, Wed, 14 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us