AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು. ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ […]

ಸರಳವಾಗಿ ಪುತ್ರಿಯ ಮದುವೆ ನೆರವೇರಿಸಿದ ಪರಿಷತ್ ಸದಸ್ಯ ಶರವಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 10, 2020 | 2:44 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಲಾಕ್​ಡೌನ್​ನಿಂದ ಏ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಮಗಳ ಮದುವೆಯನ್ನು ಜೆಡಿಎಸ್​ ವಿಧಾನಪರಿಷತ್ ಸದಸ್ಯ ಮುಂದೂಡಿದ್ದರು. ಈ ಮೂಲಕ ಜನಪ್ರತಿನಿಧಿಯಾಗಿರುವ ಶರವಣ ಅವರು, ಪುತ್ರಿಯ ಮದುವೆಯನ್ನು ಮುಂದೂಡಿ ಬೇರೆಯವರಿಗೆ ಮಾದರಿಯಾಗಿದ್ದರು.

ಇದೀಗ ಲಾಕ್​ಡೌನ್ ಸಡಿಲಿಕೆ ಮಾಡಿರುವ ಕಾರಣ ಪುತ್ರಿಯ ಮದುವೆಯನ್ನು ಇಂದು ಬೆಳಗಿನ ಶುಭ ಮುಹೂರ್ತದಲ್ಲಿ ನೆರವೇರಿಸಿದ್ದಾರೆ. ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶರವಣ ಪುತ್ರಿ ಶ್ರೇಯಾ ಮತ್ತು ಶೇಶಿರುದ್ಧ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ನೂತನ ವಧುವರರಿಗೆ ಆಶೀರ್ವದಿಸಿದ್ದಾರೆ.

Published On - 1:57 pm, Wed, 10 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು