AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ರಣರಂಗವಾಗಲಿದೆ ತುರುವೇಕೆರೆ: BJP ಶಾಸಕ ವಿರುದ್ಧ JDS ಬೃಹತ್​ ಪ್ರತಿಭಟನೆ

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ಜಮೀನು ಒತ್ತುವರಿಯಾಗಿದ್ದ ಆರೋಪದಡಿ ಬಿಜೆಪಿ ಶಾಸಕ ಮಸಾಲೆ ಜಯರಾಮ್​ ರೈತರ ಜಮೀನು ತೆರವುಗೊಳಿಸಿದ್ದಾರೆ ಎಂದು ಖಂಡಿಸಿ ಇಂದು ಪಟ್ಟಣದಲ್ಲಿ ಜೆಡಿಎಸ್​ನಿಂದ ಬೃಹತ್​ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ. ಹಾಲಿ ಶಾಸಕ ಮಸಾಲೆ ಜಯರಾಮ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ MT ಕೃಷ್ಣಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಸಹ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಜೊತೆಗೆ, ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಇದ್ದರೂ ಮಾಜಿ ಶಾಸಕ MT ಕೃಷ್ಣಪ್ಪ […]

ರಾಜಕೀಯ ರಣರಂಗವಾಗಲಿದೆ ತುರುವೇಕೆರೆ: BJP ಶಾಸಕ ವಿರುದ್ಧ JDS ಬೃಹತ್​ ಪ್ರತಿಭಟನೆ
KUSHAL V
|

Updated on:Aug 31, 2020 | 11:49 AM

Share

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ಜಮೀನು ಒತ್ತುವರಿಯಾಗಿದ್ದ ಆರೋಪದಡಿ ಬಿಜೆಪಿ ಶಾಸಕ ಮಸಾಲೆ ಜಯರಾಮ್​ ರೈತರ ಜಮೀನು ತೆರವುಗೊಳಿಸಿದ್ದಾರೆ ಎಂದು ಖಂಡಿಸಿ ಇಂದು ಪಟ್ಟಣದಲ್ಲಿ ಜೆಡಿಎಸ್​ನಿಂದ ಬೃಹತ್​ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ. ಹಾಲಿ ಶಾಸಕ ಮಸಾಲೆ ಜಯರಾಮ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ MT ಕೃಷ್ಣಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಸಹ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಜೊತೆಗೆ, ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಇದ್ದರೂ ಮಾಜಿ ಶಾಸಕ MT ಕೃಷ್ಣಪ್ಪ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ತುರುವೇಕೆರೆ ತಾಲೂಕಿನ ಗುಡ್ಡೇನಹಳ್ಳಿ ಗ್ರಾಮದ ಬಳಿ ಜಮೀನು ಒತ್ತುವರಿಯಾಗಿದ್ದ ಆರೋಪದಡಿ ಅದನ್ನು ತೆರವುಗೊಳಿಸಲಾಗಿತ್ತು. ಈ ತೆರವು ಕಾರ್ಯಾಚರಣೆಗೆ ಶಾಸಕರ ಬೆಂಬಲವಿತ್ತ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂಧು ಪ್ರತಿಭಟನೆ ನಡೆಯಲಿದೆ.

ತುರುವೇಕೆರೆ ಪಟ್ಟಣಕ್ಕೆ ಖಾಕಿ ಸರ್ಪಗಾವಲು ಮಧ್ಯಾಹ್ನ 12 ಕ್ಕೆ ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಇಡೀ ತುರುವೇಕೆರೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರು ಒಂದೆಡೆ ಸೇರದಂತೆ ಎಚ್ಚರಿಕೆ ವಹಿಸಲಾಗಿದ್ದು ಇಡೀ ತುರುವೇಕೆರೆಯಲ್ಲಿ ನೂರಾರು ಪೊಲೀಸರ ಸರ್ಪಗಾವಲು ಕಂಡುಬಂತು.

ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಪೊಲೀಸರ ಬಂದೋಬಸ್ತ್ ಹೆಚ್ಚಿಸಲಾಗಿದ್ದು 3 DySP, 30 PSI, 5 KSRP ತುಕಡಿಗಳನ್ನ ನಿಯೋಜಿಸಲಾಗಿದೆ. ಎರಡೂ ಪಕ್ಷಗಳಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ತುರವೇಕೆರೆ ಗಡಿಯಲ್ಲೇ ಮಾಜಿ ಸಿಎಂ HD ಕುಮಾರಸ್ವಾಮಿರನ್ನ ತಡೆಯೋ ಸಾಧ್ಯತೆಯಿದೆ. ಸೆಕ್ಷನ್ 144 ನಡುವೆಯೇ HDK ಪ್ರತಿಭಟನೆ ನಡೆಸಲು ಆಗಮಿಸ್ತಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನ ಒಟ್ಟುಗೂಡದಂತೆ ಎಚ್ಚರವಹಿಸಿರೋ ಖಾಕಿ ಪಡೆ ಬಿಜೆಪಿ ಕಾರ್ಯಕರ್ತರ ಮೇಲೂ ಕಣ್ಣಿಟ್ಟಿದ್ದಾರೆ. ಜೊತೆಗೆ, ತುರುವೇಕೆರೆಯಲ್ಲೇ SP ಕೋನಾವಂ ಶ್ರೀಕೃಷ್ಣ ಮೊಕ್ಕಾಂ ಹೂಡಿದ್ದಾರೆ.

Published On - 11:28 am, Mon, 31 August 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ