ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ. ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ […]

ಎಸಿ ಭೇಟಿ ಬಳಿಕ ಯೇಸು ಪ್ರತಿಮೆ ಕಾಮಗಾರಿ ಸ್ಥಗಿತ
ಸಾಧು ಶ್ರೀನಾಥ್​

Updated on: Dec 31, 2019 | 2:29 PM

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಬೆಟ್ಟದಲ್ಲಿ ಯೇಸುವಿನ ಪ್ರತಿಮೆಯ ಕಾಮಗಾರಿ ಸ್ಥಗಿತಗೊಂಡಿದೆ. ಬೆಟ್ಟದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಸಹ ಜಾಗ ಖಾಲಿ ಮಾಡಿದ್ದಾರೆ.

ಯೇಸುವಿನ ಪ್ರತಿಮೆ ನಿರ್ಮಾಣ ಸಂಬಂಧ ವರದಿ ನೀಡುವಂತೆ ಕಂದಾಯ ಸಚಿವ ಆರ್​.ಅಶೋಕ್ ರಾಮನಗರ ಡಿಸಿ ಎಂ.ಎಸ್.ಅರ್ಚನಾಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 28ರಂದು ಕಪಾಲಬೆಟ್ಟಕ್ಕೆ ಕನಕಪುರ ತಹಶೀಲ್ದಾರ್ ಆನಂದಯ್ಯ, ರಾಮನಗರ ಎಸಿ ದಾಕ್ಷಾಯಿಣಿ ಭೇಟಿ ನೀಡಿದ್ದರು. ಅಂದಿನಿಂದಲೇ ಕಾಮಗಾರಿ ಕೆಲಸ ಸ್ಥಗಿತವಾಗಿದೆ. ತಹಶೀಲ್ದಾರ್ ಆನಂದಯ್ಯ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ಸದ್ಯ ಕಪಾಲ ಬೆಟ್ಟಕ್ಕೆ ಸಾತನೂರು ಪೊಲೀಸರ ಭದ್ರತೆಯಲ್ಲಿದೆ.

ಡಿಸೆಂಬರ್ 25ರಂದು 114 ಅಡಿ ಎತ್ತರದ ಯೇಸುವಿನ ಪ್ರತಿಮೆ ನಿರ್ಮಾಣಕ್ಕೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶಿಲಾನ್ಯಾಸ ನೇರವೇರಿಸಿದ್ದರು. ಯೇಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Published On - 1:25 pm, Tue, 31 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us