AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಉರುಳಿ 11 ಮಂದಿ ಸಾವು

ರಸ್ತೆಯಲ್ಲಿ ಅಡ್ಡಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆಂದು ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಟ್ರಾಲಿ ಉರುಳಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಉರುಳಿ 11 ಮಂದಿ ಸಾವು
ಪೊಲೀಸ್ ಠಾಣೆಯಲ್ಲಿ ನೆರೆದಿರುವ ಸಂಬಂಧಿಕರು.
TV9 Web
| Edited By: |

Updated on: Oct 15, 2021 | 6:52 PM

Share

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿ ಸಮೀಪ ಶುಕ್ರವಾರ ಟ್ರ್ಯಾಕ್ಟರ್ ಟ್ರಾಲಿ ಉರುಳಿ 11 ಮಂದಿ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅಡ್ಡಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆಂದು ಚಾಲಕ ಏಕಾಏಕಿ ಬ್ರೇಕ್ ಹಾಕಿದಾಗ ಟ್ರಾಲಿ ಉರುಳಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಚಿರ್​ಗಾವ್​ ಪ್ರದೇಶದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಪಾಂಡೊಖರ್ ಗ್ರಾಮದಿಂದ ಸುಮಾರು 30 ಕುಟುಂಬಗಳು ಎರಾಚ್​ನಲ್ಲಿರುವ ದೇವಸ್ಥಾನಕ್ಕೆ ಟ್ರ್ಯಾಕ್ಟರ್​ಗಳಲ್ಲಿ ಯಾತ್ರೆ ಹೋಗುತ್ತಿದ್ದರು. ಈ ವೇಳೆ ಟ್ರಾಲಿ ಉರುಳಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿವಹರಿ ಮೀನಾ ತಿಳಿಸಿದ್ದಾರೆ. ಮೃತರ ಪೈಕಿ ನಾಲ್ವರು ಮಕ್ಕಳು ಮತ್ತು ಏಳು ಮಂದಿ ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲು ಹಾಗೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಸೂಚಿಸಿದ್ದಾರೆ.

ದಸರಾ ಮೆರವಣಿಗೆ ಮೇಲೆ ಕಾರು ಹರಿದು ನಾಲ್ವರ ಸಾವು ದಸರಾ ಮೆರವಣಿಗೆ ಮೇಲೆ ಕಾರು ಹರಿದು ನಾಲ್ವರು ಮೃತಪಟ್ಟಿರುವ ಘಟನೆ ಛತ್ತೀಸ್​ಗಡದ ಜಶ್​ಪುರ ಪಟ್ಟಣದಲ್ಲಿ ನಡೆದಿದೆ. ದಸರಾ ಮೆರವಣಿಗೆ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ನುಗ್ಗಿದ ಕಾರನ್ನು ಬೆನ್ನಟ್ಟಿ ಹೋದ ಸ್ಥಳೀಯರು ಆಕ್ರೋಶದಿಂದ ಬೆಂಕಿ ಹಚ್ಚಿದ್ದಾರೆ. ಘಟನಾ ಸ್ಥಳದಲ್ಲಿ ನೂರಾರು ಜನರು ನೆರೆದಿದ್ದು ಕಾರು ನುಗ್ಗಿಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಛತ್ತೀಸಗಡ-ಜಾರ್ಖಂಡ್ ರಾಜ್ಯದ ಗಡಿಯಲ್ಲಿರುವ ಜಶಪುರದಲ್ಲಿ ದುರಂತ ಸಂಭವಿಸಿದೆ. ಗಾಂಜಾ ತುಂಬಿದ್ದ ಕಾರನ್ನು ಪೊಲೀಸರು ಹಿಡಿಯಬಹುದು ಎಂದು ವೇಗವಾಗಿ ಓಡಿಸಿದ್ದಾರೆ. ಈ ವೇಳೆ ದುರ್ಗಾ ವಿಸರ್ಜನೆಯ ಮೆರವಣಿಗೆಯಲ್ಲಿದ್ದ ಭಕ್ತರ ಮೇಲೆ ಕಾರು ಹರಿದಿದೆ. ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದು, ಶೋಧದ ವೇಳೆ ಕಾರಿನಲ್ಲಿ ಗಾಂಜಾ ಪತ್ತೆಯಾಗಿದೆ. ಮೃತರಿಗೆ ತಲಾ ₹ 50 ಲಕ್ಷ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ರಮಣ್ ಸಿಂಗ್ ಒತ್ತಾಯಿಸಿದ್ದಾರೆ.

(Jhansi Accident 11 Killed After Tractor Trolley Overturns In Uttar Pradesh Jhansi)

ಇದನ್ನೂ ಓದಿ: ನೆಲಮಂಗಲ, ರಾಮನಗರದಲ್ಲಿ ರಸ್ತೆ ಅಪಘಾತ: ಒಟ್ಟು ಮೂವರು ಸಾವು ಇದನ್ನೂ ಓದಿ: ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!