AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರಿಗೂ ತಟ್ಟಿದ ನೀರಿನ ಬಿಸಿ, ಹಳೆಯ ಪುರಾತನ ಉಗ್ರನರಸಿಂಹ ದೇವಸ್ಥಾನ ಬಂದ್

ಬೀದರ್: ಅದು ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು. ನೀರಿದ್ರಷ್ಟೇ ಆ ದೇಗುಲದ ಒಳಗೆ ಹೋಗಿ ಭಕ್ತರು ದರ್ಶನ ಪಡೆಯಬಹುದು. ಆದ್ರೆ ಈಗ ದೇಗುಲಕ್ಕೆ ಜಲಕಂಟಕ ಎದುರಾಗಿದೆ. ಐತಿಹಾಸಿಕ ಉಗ್ರನರಸಿಂಹ ದೇವಸ್ಥಾನ. ಬೀದರ್ ಜಿಲ್ಲೆಯಲ್ಲಿರುವ ಈ ಐತಿಹಾಸಿಕ ದೇಗುಲ ಸುಮಾರು 1200ವರ್ಷಗಳಷ್ಟು ಹಳೆಯದಾದ ಪುರಾತನ ದೇವಸ್ಥಾನ. ಈ ದೇವಸ್ಥಾನದ ವಿಶೇಷ ಅಂದ್ರೆ ಸುಮಾರು ಮುನ್ನೂರು ಮೀಟರ್ ಉದ್ದದ ಎದೆ ಎತ್ತರದ ನೀರಿನಲ್ಲಿ ಸಾಗಿ ದರ್ಶನ ಪಡೆಯಬೇಕು. ಮಳೆಗಾಲ, […]

ಭಕ್ತರಿಗೂ ತಟ್ಟಿದ ನೀರಿನ ಬಿಸಿ, ಹಳೆಯ ಪುರಾತನ ಉಗ್ರನರಸಿಂಹ ದೇವಸ್ಥಾನ ಬಂದ್
ಆಯೇಷಾ ಬಾನು
|

Updated on: Nov 16, 2020 | 7:41 AM

Share

ಬೀದರ್: ಅದು ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು. ನೀರಿದ್ರಷ್ಟೇ ಆ ದೇಗುಲದ ಒಳಗೆ ಹೋಗಿ ಭಕ್ತರು ದರ್ಶನ ಪಡೆಯಬಹುದು. ಆದ್ರೆ ಈಗ ದೇಗುಲಕ್ಕೆ ಜಲಕಂಟಕ ಎದುರಾಗಿದೆ.

ಐತಿಹಾಸಿಕ ಉಗ್ರನರಸಿಂಹ ದೇವಸ್ಥಾನ. ಬೀದರ್ ಜಿಲ್ಲೆಯಲ್ಲಿರುವ ಈ ಐತಿಹಾಸಿಕ ದೇಗುಲ ಸುಮಾರು 1200ವರ್ಷಗಳಷ್ಟು ಹಳೆಯದಾದ ಪುರಾತನ ದೇವಸ್ಥಾನ.

ಈ ದೇವಸ್ಥಾನದ ವಿಶೇಷ ಅಂದ್ರೆ ಸುಮಾರು ಮುನ್ನೂರು ಮೀಟರ್ ಉದ್ದದ ಎದೆ ಎತ್ತರದ ನೀರಿನಲ್ಲಿ ಸಾಗಿ ದರ್ಶನ ಪಡೆಯಬೇಕು. ಮಳೆಗಾಲ, ಚಳಿಗಾಲ, ಬೇಸಿಗೆಕಾಲದಲ್ಲಿ ಇಲ್ಲಿ ನೀರು ಬತ್ತಿದ ಉದಾಹರಣೆಯೇ ಇಲ್ಲ. ಆದ್ರೆ ಕಳೆದೆರಡು ವರ್ಷಗಳಿಂದ ದೇಗುಲದ ಗುಹೆಯಲ್ಲಿ ನೀರು ಬತ್ತಿದೆ. ಪರಿಣಾಮ ದೇವರ ದರ್ಶನಕ್ಕೆ ಬ್ರೇಕ್ ಹಾಕಲಾಗಿದೆ. ಹೀಗಾಗಿ ಜನ ಹೊರಗಿನಿಂದಲೇ ಉಗ್ರನರಸಿಂಹ ಸ್ವಾಮಿಯ ದರ್ಶನ ಮಾಡಿಕೊಂಡು ಹೋಗುವಂತಹ ಸ್ಥಿತಿ ಎದುರಾಗಿದೆ.

ದೇವಸ್ಥಾನದ ಸುತ್ತಮುತ್ತ ಅನಧಿಕೃತವಾಗಿ ಮನೆಗಳು ತಲೆ ಎತ್ತಿವೆ. ಕಾನೂನು ಬಾಹಿರವಾಗಿ ನೂರಾರು ಬೋರ್‌ವೆಲ್, ಬಾವಿಗಳನ್ನ ತೋಡಲಾಗಿದೆ. ಪರಿಣಾಮ ದೇವಾಲಯದ ಗುಹೆಗೆ ಬರುತ್ತಿದ್ದ ನೀರು ನಿಂತಿದೆಯಂತೆ. ಜಿಲ್ಲಾಡಳಿತ ಎಚ್ಚೆತ್ತು ನೀರು ಬಾರದಿರುವುದಕ್ಕೆ ಕಾರಣ ಹುಡುಕಿ ಸಮೀಪದಿಂದ ದೇವರ ದರ್ಶನ ಪಡೆಯಲು ಅವಕಾಶ ಮಾಡಿಕೊಡಬೇಕು ಅಂತ ಭಕ್ತರು ಬೇಡಿಕೊಂಡಿದ್ದಾರೆ.

ಇಂತಹ ಐತಿಹಾಸಿಕ ದೇಗುಲ ಪ್ರವೇಶಕ್ಕೆ ಅವಕಾಶ ಸಿಗುತ್ತಿಲ್ಲ ಅನ್ನೋ ಕೊರಗು ಭಕ್ತರನ್ನ ಕಾಡುತ್ತಿದೆ. ಹಾಗಾಗಿ ಸಹಸ್ರಾರು ವರ್ಷ ಬತ್ತದ ನೀರಿನ ಸೆಲೆಯನ್ನ ಜಿಲ್ಲಾಡಳಿತ ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿ ಅನ್ನೋದು ಭಕ್ತರ ಆಶಯವಾಗಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ