AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Dec 30, 2020 | 3:26 PM

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ