AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್​ಗಳಿಗೆ ಪಾಲಕರೇ ಕಾರಣವೆಂದ ಜೆಎಮ್​ಎಮ್ ಶಾಸಕ!

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ. ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ. ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆಎಮ್​ಎಮ್ ಪಕ್ಷ ಅವರ ಹೇಳಿಕೆಗೆ ಬಹಳ ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದೆ. ಆದರೆ […]

ರೇಪ್​ಗಳಿಗೆ ಪಾಲಕರೇ ಕಾರಣವೆಂದ ಜೆಎಮ್​ಎಮ್ ಶಾಸಕ!
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 20, 2020 | 10:34 PM

Share

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ.

ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ. ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆಎಮ್​ಎಮ್ ಪಕ್ಷ ಅವರ ಹೇಳಿಕೆಗೆ ಬಹಳ ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದೆ. ಆದರೆ ವಿರೋಧಪಕ್ಷವಾಗಿರುವ ಬಿಜೆಪಿ ಶಾಸಕ ಹೆಂಬ್ರೊಮ್ ಸರ್ಕಾರ ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಒಬ್ಬ ಶಾಸಕ ಅಂಥ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದಿದೆ.

ದುಮ್ಕಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಹೆಂಬ್ರೊಮ್, ‘‘ಯೌವನಸ್ಥ ಮಕ್ಕಳು ಗಾಂಜಾ ಸೇವಿಸಿ ಮನೆಗೆ ಬಂದಾಗ ಪಾಲಕರು ಸುಮ್ಮನಿದ್ದುಬಿಡುತ್ತಾರೆ. ಈಗ ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್ ಇದೆ. ಹುಡುಗಹುಡುಗಿಯರು ಮೇಲಿಂದ ಮೇಲೆ ಫೋನಲ್ಲಿ ಮಾತಾಡುತ್ತಲೇ ಇರುತ್ತಾರೆ, ಆದರೆ ತಂದೆತಾಯಿಗಳು ತುಟಿಪಿಟಿಕ್ಕೆನ್ನುವುದಿಲ್ಲ. ವಯಸ್ಸಿಗೆ ಬಂದ ಹುಡುಗಿಯೊಬ್ಬಳು ಸಾಯಂಕಾಲದ ಹೊತ್ತು ಮನೆಯಿಂದ ಹೊರಗಡೆ ಹೋದರೆ ಅದಕ್ಕೆ ಪಾಲಕರು ಹೊಣೆಗಾರರಲ್ಲವೇ? ಇಂಥ ಘಟನೆಗಳು (ದಮ್ಕಾ ಗ್ಯಾಂಗ್-ರೇಪ್ ಮತ್ತು ಕೊಲೆ) ನಡೆದಾಗಲೇ ಅವರು ನಿದ್ರೆಯಿಂದ ಎಚ್ಚೆತ್ತುಕೊಳ್ಳುತ್ತಾರೆ,’’ ಅಂತ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ, ಜೆಎಮ್​ಎಮ್ ನೇತೃತ್ವದ ಸಮ್ಮಿಶ್ರ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಸಮರ್ಥಿಸಿಕೊಂಡಿರುವ ಹೆಂಬ್ರೊಮ್, ಅತ್ಯಾಚಾರದ ಬಗ್ಗೆ ದೂರು ದಾಖಲಾದ ಕೂಡಲೇ ಪೊಲೀಸ್ ಕಾರ್ಯಾಚರಣೆ ನಡೆಸಿದೆ ಎಂದು ಹೇಳಿದ್ದಾರೆ.

ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾದೇವ್, ‘‘ಶಾಸಕರ ಹೇಳಿಕೆ ಹೇವರಿಕೆ ಹುಟ್ಟಿಸುತ್ತದೆ. ಇವರೆಲ್ಲ ಸೇರಿ ಜಾರ್ಖಂಡನ್ನು ತಾಲಿಬಾನ್ ಆಗಿ ಪರಿವರ್ತಿಸಲು ನಿರ್ಧರಿಸಿರುವಂತಿದೆ,’’ ಎಂದಿದ್ದಾರೆ.

ಜೆಎಮ್​ಎಮ್ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ಪಾಂಡೆ ತಮ್ಮ ಹೇಳಿಕೆಯಲ್ಲಿ,‘‘ಸಮಾಜದ ಕೆಡಕುಗಳ ಬಗ್ಗೆ ಹೆಂಬ್ರೊಮ್ ಮಾತಾಡಿದ್ದಾರೆ, ಪಕ್ಷದ ನಾಯಕರು ಅವರ ಜೊತೆ ಈಗಾಗಲೇ ಮಾತಾಡಿದ್ದು ಅವರು ನೀಡಿರುವ ಸ್ಪಷ್ಟೀಕರಣದಿಂದ ಸಂತೃಪ್ತರಾಗಿದ್ದಾರೆ,’’ ಎಂದು ಹೇಳಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್