AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪ್​ಗಳಿಗೆ ಪಾಲಕರೇ ಕಾರಣವೆಂದ ಜೆಎಮ್​ಎಮ್ ಶಾಸಕ!

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ. ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ. ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆಎಮ್​ಎಮ್ ಪಕ್ಷ ಅವರ ಹೇಳಿಕೆಗೆ ಬಹಳ ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದೆ. ಆದರೆ […]

ರೇಪ್​ಗಳಿಗೆ ಪಾಲಕರೇ ಕಾರಣವೆಂದ ಜೆಎಮ್​ಎಮ್ ಶಾಸಕ!
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 20, 2020 | 10:34 PM

Share

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ.

ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ. ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆಎಮ್​ಎಮ್ ಪಕ್ಷ ಅವರ ಹೇಳಿಕೆಗೆ ಬಹಳ ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದೆ. ಆದರೆ ವಿರೋಧಪಕ್ಷವಾಗಿರುವ ಬಿಜೆಪಿ ಶಾಸಕ ಹೆಂಬ್ರೊಮ್ ಸರ್ಕಾರ ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಒಬ್ಬ ಶಾಸಕ ಅಂಥ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದಿದೆ.

ದುಮ್ಕಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಹೆಂಬ್ರೊಮ್, ‘‘ಯೌವನಸ್ಥ ಮಕ್ಕಳು ಗಾಂಜಾ ಸೇವಿಸಿ ಮನೆಗೆ ಬಂದಾಗ ಪಾಲಕರು ಸುಮ್ಮನಿದ್ದುಬಿಡುತ್ತಾರೆ. ಈಗ ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್ ಇದೆ. ಹುಡುಗಹುಡುಗಿಯರು ಮೇಲಿಂದ ಮೇಲೆ ಫೋನಲ್ಲಿ ಮಾತಾಡುತ್ತಲೇ ಇರುತ್ತಾರೆ, ಆದರೆ ತಂದೆತಾಯಿಗಳು ತುಟಿಪಿಟಿಕ್ಕೆನ್ನುವುದಿಲ್ಲ. ವಯಸ್ಸಿಗೆ ಬಂದ ಹುಡುಗಿಯೊಬ್ಬಳು ಸಾಯಂಕಾಲದ ಹೊತ್ತು ಮನೆಯಿಂದ ಹೊರಗಡೆ ಹೋದರೆ ಅದಕ್ಕೆ ಪಾಲಕರು ಹೊಣೆಗಾರರಲ್ಲವೇ? ಇಂಥ ಘಟನೆಗಳು (ದಮ್ಕಾ ಗ್ಯಾಂಗ್-ರೇಪ್ ಮತ್ತು ಕೊಲೆ) ನಡೆದಾಗಲೇ ಅವರು ನಿದ್ರೆಯಿಂದ ಎಚ್ಚೆತ್ತುಕೊಳ್ಳುತ್ತಾರೆ,’’ ಅಂತ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ, ಜೆಎಮ್​ಎಮ್ ನೇತೃತ್ವದ ಸಮ್ಮಿಶ್ರ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಸಮರ್ಥಿಸಿಕೊಂಡಿರುವ ಹೆಂಬ್ರೊಮ್, ಅತ್ಯಾಚಾರದ ಬಗ್ಗೆ ದೂರು ದಾಖಲಾದ ಕೂಡಲೇ ಪೊಲೀಸ್ ಕಾರ್ಯಾಚರಣೆ ನಡೆಸಿದೆ ಎಂದು ಹೇಳಿದ್ದಾರೆ.

ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾದೇವ್, ‘‘ಶಾಸಕರ ಹೇಳಿಕೆ ಹೇವರಿಕೆ ಹುಟ್ಟಿಸುತ್ತದೆ. ಇವರೆಲ್ಲ ಸೇರಿ ಜಾರ್ಖಂಡನ್ನು ತಾಲಿಬಾನ್ ಆಗಿ ಪರಿವರ್ತಿಸಲು ನಿರ್ಧರಿಸಿರುವಂತಿದೆ,’’ ಎಂದಿದ್ದಾರೆ.

ಜೆಎಮ್​ಎಮ್ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ಪಾಂಡೆ ತಮ್ಮ ಹೇಳಿಕೆಯಲ್ಲಿ,‘‘ಸಮಾಜದ ಕೆಡಕುಗಳ ಬಗ್ಗೆ ಹೆಂಬ್ರೊಮ್ ಮಾತಾಡಿದ್ದಾರೆ, ಪಕ್ಷದ ನಾಯಕರು ಅವರ ಜೊತೆ ಈಗಾಗಲೇ ಮಾತಾಡಿದ್ದು ಅವರು ನೀಡಿರುವ ಸ್ಪಷ್ಟೀಕರಣದಿಂದ ಸಂತೃಪ್ತರಾಗಿದ್ದಾರೆ,’’ ಎಂದು ಹೇಳಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!