ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ..

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!
ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!
ಸಾಧು ಶ್ರೀನಾಥ್​

Updated on: Jan 28, 2021 | 10:28 AM

ವಿಜಯಪುರ: ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಈಶಾನ್ಯ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ.

ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!

ಇಂದು ಬೆಳಗಿನ ಜಾವ ಹೈದ್ರಾಬಾದ್​ನಿಂದ ವಿಜಯಪುರಕ್ಕೆ ಬಂದ ಬಸ್​ನಲ್ಲಿ ಹಿರಿಯ ಪತ್ರಕರ್ತ ಚಂದ್ರಕಾಂತ್​ ಮಾವೂರ ಚೈನ್ ಕಳೆದುಕೊಂಡಿದ್ರು. ಆ ಚೈನ್ ನಿರ್ವಾಹಕರಿಗೆ ದೊರಕಿತ್ತು. ಈ ವೇಳೆ ಬಸ್​ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ಪ್ರಯಾಣಿಕರ ರಿಸರ್ವೇಶನ್ ಟಿಕೆಟ್​ನಲ್ಲಿನ ನಂಬರ್​ಗೆ ಕರೆ ಮಾಡಿ ಚೈನ್ ಸಿಕ್ಕಿದ್ದು, ಅದನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ.

Published On - 10:27 am, Thu, 28 January 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us