- Kannada News Latest news ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆಗೆ ಧುಮುಕಿದ ಕಮಲಧಾರಿ ಅಣ್ಣಾಮಲೈ
ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆಗೆ ಧುಮುಕಿದ ಕಮಲಧಾರಿ ಅಣ್ಣಾಮಲೈ
ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.
Updated on: Mar 19, 2021 | 7:41 PM

K Annamalai filed nomination from BJP in Aravakurichi constituency for Tamil Nadu assembly elections 2021 here are the photos

K Annamalai filed nomination from BJP in Aravakurichi constituency for Tamil Nadu assembly elections 2021 here are the photos

ಡಿಎಂಕೆ (ದ್ರಾವಿಡ ಮುನೇತ್ರ ಕಾಳಗಂ) ಪಕ್ಷದ ಭದ್ರಕೋಟೆ ಎಂದೆನಿಸಿಕೊಂಡಿರುವ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರೇ ಹೆಚ್ಚಿದ್ದು, ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

Election commission hold BJP Candidate Annamalai nomination for Tamil Nadu assembly election 2021 after some allegations

ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ.

ಈ ಪೈಕಿ ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಲಭಿಸಿದೆ.

ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದು, 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ.

ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸುತ್ತಿದೆ.

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ



