AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಕವಿ ದಾಂಪತ್ಯದಲ್ಲಿ ಬಿರುಕು: ಪತಿ-ಪತ್ನಿ ಹೇಳೋದೇನು?

ಬೆಳಗಾವಿ: ಚಿತ್ರಸಾಹಿತಿ K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ದಂಪತಿಯೇ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಟಿವಿ 9 ಜೊತೆ ಮಾತನಾಡಿದ ಚಿತ್ರಸಾಹಿತಿ, ಪ್ರೇಮಕವಿ K ಕಲ್ಯಾಣ್ ನಮ್ಮ ದಾಂಪತ್ಯದಲ್ಲಿ ಬಿರುಕು ಬಂದಿದ್ದು ಅಚ್ಚರಿಯಾಗಿದೆ. ಆದರೆ, ಈ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯುತ್ತದೆ. ನನ್ನ ಪತ್ನಿ ಅಶ್ವಿನಿ ಕೆಲವೊಂದು ಆರೋಪ ಮಾಡಿದ್ದಾರೆ. ಅದರ ಬಗ್ಗೆಯೂ ನಾನು ಸ್ಪಷ್ಟೀಕರಣ ನೀಡುತ್ತೇನೆ. ವಾಸ್ತವಾಂಶ, ಸತ್ಯ, ಧರ್ಮ ಯಾವತ್ತಿದ್ದರೂ ಉಳಿಯುತ್ತೆ ಎಂದು ಹೇಳಿದ್ದಾರೆ. ನನ್ನ ಕುಟುಂಬದಲ್ಲಿ ಹಲವು ಸಣ್ಣಪುಟ್ಟ ಸಮಸ್ಯೆ ಬಂದಿವೆ. ಎಲ್ಲವನ್ನೂ […]

ಪ್ರೇಮಕವಿ ದಾಂಪತ್ಯದಲ್ಲಿ ಬಿರುಕು: ಪತಿ-ಪತ್ನಿ ಹೇಳೋದೇನು?
KUSHAL V
|

Updated on:Oct 04, 2020 | 10:42 AM

Share

ಬೆಳಗಾವಿ: ಚಿತ್ರಸಾಹಿತಿ K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ದಂಪತಿಯೇ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಟಿವಿ 9 ಜೊತೆ ಮಾತನಾಡಿದ ಚಿತ್ರಸಾಹಿತಿ, ಪ್ರೇಮಕವಿ K ಕಲ್ಯಾಣ್ ನಮ್ಮ ದಾಂಪತ್ಯದಲ್ಲಿ ಬಿರುಕು ಬಂದಿದ್ದು ಅಚ್ಚರಿಯಾಗಿದೆ. ಆದರೆ, ಈ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯುತ್ತದೆ. ನನ್ನ ಪತ್ನಿ ಅಶ್ವಿನಿ ಕೆಲವೊಂದು ಆರೋಪ ಮಾಡಿದ್ದಾರೆ. ಅದರ ಬಗ್ಗೆಯೂ ನಾನು ಸ್ಪಷ್ಟೀಕರಣ ನೀಡುತ್ತೇನೆ. ವಾಸ್ತವಾಂಶ, ಸತ್ಯ, ಧರ್ಮ ಯಾವತ್ತಿದ್ದರೂ ಉಳಿಯುತ್ತೆ ಎಂದು ಹೇಳಿದ್ದಾರೆ. ನನ್ನ ಕುಟುಂಬದಲ್ಲಿ ಹಲವು ಸಣ್ಣಪುಟ್ಟ ಸಮಸ್ಯೆ ಬಂದಿವೆ. ಎಲ್ಲವನ್ನೂ ಬಗೆಹರಿಸಿಕೊಂಡು ಜೀವನ ಮಾಡುತ್ತಿದ್ದೆವು. ಈಗ ಬಂದಿರುವ ಗೊಂದಲವನ್ನು ಕೂತು ಬಗೆಹರಿಸಿಕೊಳ್ಳುತ್ತೇವೆ. ನನ್ನ ಪತ್ನಿಗೆ ಕೌನ್ಸಲಿಂಗ್ ಮಾಡಿಸಿದರೆ ಎಲ್ಲ ಸರಿಯಾಗುತ್ತೆ. ನಾನು ಇಂದಿಗೂ ನನ್ನ ಪತ್ನಿ ಜೊತೆ ಮಾತನಾಡುತ್ತಿದ್ದೇನೆ. ನಾನು, ನನ್ನ ಪತ್ನಿ ಇಬ್ಬರೂ ಈಗಲು ಚೆನ್ನಾಗಿದ್ದೇವೆ. ಆದರೆ ನನ್ನ ಪತ್ನಿ ಕೆಲವೊಂದು ಆರೋಪ ಮಾಡಿದ್ದಾರೆ. ಆ ಆರೋಪಗಳ ಬಗ್ಗೆ ಕುಳಿತು ಚರ್ಚಿಸಿದರೆ ಸರಿಯಾಗುತ್ತೆ ಎಂದು ಕಲ್ಯಾಣ್​ ಹೇಳಿದ್ದಾರೆ.

ನನ್ನ ಪತ್ನಿ ಕೆಟ್ಟವರಂತೂ ಅಲ್ಲವೇ ಅಲ್ಲ. ಸ್ವಲ್ಪ ಸಮಸ್ಯೆಯಾಗಿದೆ. ಆದರೆ ಎಲ್ಲೋ ಒಂದು ಸಮಸ್ಯೆಯಾಗಿದೆ. ಅದು ಗೊತ್ತಾಗುತ್ತಿಲ್ಲ. ನಾವಿಬ್ಬರೂ ಕುಳಿತು ಚರ್ಚೆ ಮಾಡಿದರೆ ಸರಿಯಾಗುತ್ತದೆ ಎಂದು ಚಿತ್ರಸಾಹಿತಿ, ಪ್ರೇಮಕವಿ K ಕಲ್ಯಾಣ್ ಹೇಳಿದ್ದಾರೆ. ‘ನಮ್ಮ ದಾಂಪತ್ಯ ಜೀವನ ಮತ್ತೆ ಮುಂದುವರೆಯುತ್ತೆ ಅನ್ನೋದನ್ನ ಹೇಳೋದಕ್ಕಾಗಲ್ಲ’ ಇತ್ತ ಚಿತ್ರಸಾಹಿತಿಯ ಪತ್ನಿ ಅಶ್ವಿನಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ನಾವಿಬ್ಬರೂ ದೂರವಾಗಿಲ್ಲ. ನಾನು ಕಿಡ್ನ್ಯಾಪ್ ಆಗಿಲ್ಲ ಅನ್ನೋದನ್ನ ಮಾತ್ರ ಹೇಳುತ್ತೇನೆ. ಆದರೆ, ಕೌನ್ಸಲಿಂಗ್​ ಆದ ಬಳಿಕ ಎಲ್ಲವನ್ನೂ ಹೇಳ್ತೇನೆ ಎಂದು ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ.

ನಾವು ದೂರವಾಗಿಲ್ಲ, ಕೌನ್ಸಲಿಂಗ್ ಆದ ಮೇಲೆ ಕ್ಲಿಯರ್ ಆಗಿ ಹೇಳುತ್ತೇನೆ. ನಮ್ಮ ದಾಂಪತ್ಯ ಜೀವನ ಮತ್ತೆ ಮುಂದುವರೆಯುತ್ತೆ ಅನ್ನೋದನ್ನ ಹೇಳೋದಕ್ಕಾಗಲ್ಲ. ನಮ್ಮ ಹೇಳಿಕೆಗೆ ಯಾರೂ ಕೂಡ ಕಾರಣವಲ್ಲ. ನನ್ನ ಇಷ್ಟದ ಪ್ರಕಾರವಾಗಿ ಕೌನ್ಸಲಿಂಗ್​ಗೆ ಒಳಗಾಗುತ್ತಿದ್ದೇನೆ. ಕೌನ್ಸಲಿಂಗ್ ಆದ ನಂತರ ನಾನು ಎಲ್ಲವನ್ನೂ ಮಾತನಾಡುತ್ತೀನಿ. ಇರೋ ನಿಜ ಕೌನ್ಸಲಿಂಗ್ ಆದ ನಂತರ ಗೊತ್ತಾಗುತ್ತೆ. ಯಾವಾಗ ಕೌನ್ಸಲಿಂಗ್ ನಡೆಯುತ್ತೆ ಅಂತಾ ಗೊತ್ತಿಲ್ಲಾ. ಹಾಗಾಗಿ, ಏನೇ ಹೇಳಿದ್ರೂ ಅದು ಕೌನ್ಸಲಿಂಗ್ ಆದ ನಂತರವೇ ಸರಿಯಾಗಿ ಹೇಳಲು ಸಾಧ್ಯ ಎಂದು ಕಲ್ಯಾಣ್​ ಪತ್ನಿ ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ.

Published On - 10:38 am, Sun, 4 October 20

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು