AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಒಂದು ವರ್ಷದ ಸಂಭ್ರಮ: ಮತ್ತಷ್ಟು ಗರಿಗೆದರಲು ಸಜ್ಜಾದ ಏರ್​ಪೋರ್ಟ್​

ಕಲಬುರಗಿ: ಜಿಲ್ಲೆಯಲ್ಲೊಂದು ವಿಮಾನ ನಿಲ್ದಾಣ ಆಗಬೇಕು. ಅಲ್ಲಿಂದ ವಿಮಾನ ಹಾರಾಡಬೇಕು ಎಂಬ ಕನಸು ಈಡೇರಿ ಇಂದಿಗೆ ಒಂದು ವರ್ಷವಾಗಿದೆ. ಕಳೆದ ನವೆಂಬರ್​ 22ರಿಂದ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಶುರುವಾಗಿದೆ. ಕಲಬುರಗಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ. ಬೆಂಗಳೂರಿನಿಂದ ಬಹಳಷ್ಟು ದೂರದಲ್ಲಿ ಇದೆ. ಹಾಗಾಗಿ, ಅಲ್ಲೊಂದು ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ದಶಕಗಳ ಕನಸಾಗಿತ್ತು. ಹಾಗೇ ಅದು ನಿರ್ಮಾಣವಾಗಿ, ವಿಮಾನಗಳ ಹಾರಾಟವೂ ಶುರುವಾಗಿ ಒಂದು ವರ್ಷದಲ್ಲಿ, ನಿರೀಕ್ಷೆಗೂ ಮೀರಿ ಬರೋಬ್ಬರಿ 37,016 ಮಂದಿ ಪ್ರಯಾಣಿಸಿದ್ದಾರೆ. 2006ರಲ್ಲಿ […]

ಕಲಬುರಗಿ ವಿಮಾನ ನಿಲ್ದಾಣಕ್ಕೆ ಒಂದು ವರ್ಷದ ಸಂಭ್ರಮ: ಮತ್ತಷ್ಟು ಗರಿಗೆದರಲು ಸಜ್ಜಾದ ಏರ್​ಪೋರ್ಟ್​
KUSHAL V
|

Updated on: Nov 22, 2020 | 7:40 PM

Share

ಕಲಬುರಗಿ: ಜಿಲ್ಲೆಯಲ್ಲೊಂದು ವಿಮಾನ ನಿಲ್ದಾಣ ಆಗಬೇಕು. ಅಲ್ಲಿಂದ ವಿಮಾನ ಹಾರಾಡಬೇಕು ಎಂಬ ಕನಸು ಈಡೇರಿ ಇಂದಿಗೆ ಒಂದು ವರ್ಷವಾಗಿದೆ. ಕಳೆದ ನವೆಂಬರ್​ 22ರಿಂದ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಶುರುವಾಗಿದೆ.

ಕಲಬುರಗಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ. ಬೆಂಗಳೂರಿನಿಂದ ಬಹಳಷ್ಟು ದೂರದಲ್ಲಿ ಇದೆ. ಹಾಗಾಗಿ, ಅಲ್ಲೊಂದು ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ದಶಕಗಳ ಕನಸಾಗಿತ್ತು. ಹಾಗೇ ಅದು ನಿರ್ಮಾಣವಾಗಿ, ವಿಮಾನಗಳ ಹಾರಾಟವೂ ಶುರುವಾಗಿ ಒಂದು ವರ್ಷದಲ್ಲಿ, ನಿರೀಕ್ಷೆಗೂ ಮೀರಿ ಬರೋಬ್ಬರಿ 37,016 ಮಂದಿ ಪ್ರಯಾಣಿಸಿದ್ದಾರೆ. 2006ರಲ್ಲಿ ಅಡಿಗಲ್ಲು.. ಆದ್ರೆ 2019ರಲ್ಲಿ ಲೋಕಾರ್ಪಣೆ ಜಿಲ್ಲೆಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ 2006ರಲ್ಲೇ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಅಡಿಗಲ್ಲು ಸ್ಥಾಪಿಸಿದ್ದರು. ಆದರೆ, ವಿಮಾನ ನಿಲ್ದಾಣ ಕಾಮಗಾರಿ ಮುಗಿದು, ವಿಮಾನ ಹಾರಾಟ ಪ್ರಾರಂಭವಾಗಲು ಅನೇಕ ವರ್ಷಗಳೇ ಹಿಡಿದವು. ಅನೇಕರ ಪ್ರಯತ್ನದ ಫಲವಾಗಿ 2019 ರ ನವೆಂಬರ್ 22ರಂದು ವಿಮಾನ ಹಾರಾಟ ಪ್ರಾರಂಭವಾಯಿತು.

ಅಂದ ಹಾಗೆ, ವಿಮಾನ ನಿಲ್ದಾಣದ ಅಡಿಗಲ್ಲು ಹಾಕಿದ್ದ ಸಿಎಂ ಯಡಿಯೂರಪ್ಪನವರೇ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಕೂಡ ಮಾಡಿದ್ದರು. ಇದೀಗ, ಕಳೆದ ಒಂದು ವರ್ಷದಲ್ಲಿ 924 ವಿಮಾನಗಳು ಹಾರಾಟ ನಡೆಸಿವೆ. ಆರಂಭದಲ್ಲಿ ಕೇವಲ ಒಂದೇ ವಿಮಾನ ಬೆಂಗಳೂರಿನಿಂದ ಕಲಬುರಗಿ, ಕಲಬುರಗಿಯಿಂದ ಬೆಂಗಳೂರಿಗೆ ವಾರದಲ್ಲಿ 3 ದಿನ ಮಾತ್ರ ಹಾರಾಟ ನಡೆಸುತ್ತಿತ್ತು. ಆದ್ರೆ ಇದೀಗ ಬೆಂಗಳೂರಿಗೆ 2 ವಿಮಾನಗಳು ಸೇವೆ ಒದಗಿಸುತ್ತಿದೆ. ಜೊತೆಗೆ, ಈಗ ಕಲಬುರಗಿಯಿಂದ ದೆಹಲಿಯ ಹಿಂಡನ್ ವಿಮಾನ ನಿಲ್ದಾಣಕ್ಕೆ ಕೂಡಾ ವಿಮಾನಸೇವೆ ಕಲ್ಪಿಸಲಾಗಿದೆ. ಮುಂದೆ ಕಲಬುರಗಿ ವಿಮಾನ ನಿಲ್ದಾಣದಿಂದ ತಿರುಪತಿ, ಮುಂಬೈ, ಬೆಳಗಾವಿ, ಗೋವಾ, ಹುಬ್ಬಳ್ಳಿಗೆ ಕೂಡಾ ವಿಮಾನಸೇವೆ ಕಲ್ಪಿಸುವ ಚಿಂತನೆ ನಡೆದಿದೆ.

ಕಲಬುರಗಿ ವಿಮಾನ ನಿಲ್ದಾಣದಿಂದ ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಪ್ರಯಾಣ ಮಾಡುತ್ತಿದ್ದಾರೆ. ರಾಜ್ಯ ಮತ್ತು ದೇಶದ ಬೇರಡೆ ಕೂಡಾ ವಿಮಾನಗಳ ಹಾರಾಟಕ್ಕೆ ಇದೀಗ ಬೇಡಿಕೆ ಹೆಚ್ಚಾಗಿದೆ. ರಾತ್ರಿ ವೇಳೆ ಕೂಡಾ ವಿಮಾನಗಳ ಲ್ಯಾಂಡಿಂಗ್ ಸೇವೆ ಆರಂಭಿಸಲಾಗುತ್ತದೆ. ವಿಮಾನಯಾನ ತರಬೇತಿ ಕೇಂದ್ರ ಕೂಡಾ ಬರುವ ಜನವರಿಯಲ್ಲಿ ಪ್ರಾರಂಭವಾಗಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ