‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ. ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು. ವೃದ್ಧನ ಕುಟುಂಬದ […]

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’
ಸಾಧು ಶ್ರೀನಾಥ್​

Updated on: Mar 13, 2020 | 12:18 PM

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ.

ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು.

ವೃದ್ಧನ ಕುಟುಂಬದ ನಾಲ್ವರಲ್ಲಿ ಕೆಮ್ಮು, ನೆಗಡಿ ಆರಂಭವಾಗಿದೆ. ವೃದ್ಧನ ಸಂಪರ್ಕದಲ್ಲಿದ್ದವರ ರಕ್ತ, ಕಫದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್​ಗೆ ಕಳಿಸಿದ್ದೇವೆ ಎಂದು ವೃದ್ಧನ ಕುಟುಂಬದ ಕುರಿತು ಜಿಲ್ಲಾಧಿಕಾರಿ ಶರತ್ ಮಾಹಿತಿ ನೀಡಿದರು.

ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ:
ಕೊರೊನಾ ವೈರಸ್​ನಿಂದ ಕಲಬುರಗಿಯ ವೃದ್ಧ ಸಾವು ಹಿನ್ನೆಲೆಯಲ್ಲಿ ನಗರದ ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ ಘೋಷಿಸಲಾಗಿದೆ. ನಗರದ ಶಾಲಾ ಕಾಲೇಜುಗಳಿಗೆ ಮಾತ್ರ ಒಂದು ವಾರ ರಜೆ ಘೋಷಿಸಿ ಡಿಸಿ ಶರತ್ ಆದೇಶ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us