AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಡಿ.ಸಿ. ಯಶವಂತ ಗುರುಕಾರ್ ಜೋಳಿಗೆ ಹಿಡಿದರು! ಹಣ ಎತ್ತಲು ಅಲ್ಲಾ, ಗ್ರಾಮೀಣ ಭಾಗದ ಜನರ ಓದಿಗಾಗಿ!

IAS Yashwant Gurikar: ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಮುಂಜಾನೆ ಭೀಮಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸೂಟು ಬೂಟು ಬಿಟ್ಟು, ಜಿಲ್ಲಾಧಿಕಾರಿ ಹಮ್ಮುಬಿಮ್ಮು ಪಕ್ಕಕ್ಕಿಟ್ಟು ಪಂಚೆ ತೊಟ್ಟು, ಟಾಂಗಾದಲ್ಲಿ ಗ್ರಾಮಕ್ಕೆ ಎಂಟ್ರಿ ಕೊಟ್ಟರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೋಳಿಗೆ ಹಿಡಿದು ಸಂಚರಿಸಿದ್ದು ವಿಶೇಷವಾಗಿತ್ತು.

ಕಲಬುರಗಿ ಡಿ.ಸಿ. ಯಶವಂತ ಗುರುಕಾರ್ ಜೋಳಿಗೆ ಹಿಡಿದರು!  ಹಣ ಎತ್ತಲು ಅಲ್ಲಾ, ಗ್ರಾಮೀಣ ಭಾಗದ ಜನರ ಓದಿಗಾಗಿ!
ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಜೋಳಿಗೆ ಹಿಡಿದರು! ಹಣ ಎತ್ತಲು ಅಲ್ಲಾ, ಗ್ರಾಮೀಣ ಭಾಗದ ಜನರ ಓದಿಗಾಗಿ!
TV9 Web
| Updated By: ಸಾಧು ಶ್ರೀನಾಥ್​|

Updated on:Mar 19, 2022 | 3:57 PM

Share

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಇದೀಗ ಜೋಳಿಗೆ ಹಿಡಿದು ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಜಿಲ್ಲಾಧಿಕಾರಿ ಜೋಳಿಗೆ ಹಿಡಿದಿದ್ದು ಹಣಕ್ಕಾಗಿ ಅಲ್ಲಾ! ಗ್ರಾಮೀಣ ಭಾಗದ ಜನರ ಓದಿಗೆ ಅನುಕೂಲವಾಗಲು ಪುಸ್ತಕಗಳಿಗಾಗಿ…!!! ರಾಜ್ಯದಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಸರ್ಕಾರ ಪ್ರಾರಂಭಿಸಿದೆ. ಜಿಲ್ಲಾಧಿಕಾರಿ, ತಹಶಿಲ್ದಾರಗಳು ತಮ್ಮ ವ್ಯಾಪ್ತಿಯಲ್ಲಿ ಒಂದು ದಿನ ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಾರೆ. ಅದರೆ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಮಾತ್ರ ಪ್ರತಿ ಗ್ರಾಮ ವಾಸ್ತವ್ಯದಲ್ಲಿ ಕೂಡಾ ತಮ್ಮ ನಡೆ ನುಡಿ ಆಚಾರಗಳಿಂದ ಜನರ ಮೆಚ್ಚುಗೆ ಪಡೆಯುತ್ತಿದ್ದಾರೆ. ಇಂದು ತಮ್ಮ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಗ್ರಾಮವಾಸ್ತವ್ಯದಲ್ಲಿ ಜೋಳಿಗೆ ಹಿಡಿದು ಜನರಿಂದ ಪುಸ್ತಕಗಳನ್ನು (Book) ಬೇಡಿ ಪಡೆಯುವ ಮೂಲಕ ಹೊಸ ಸಂಪ್ರದಾಯಕ್ಕೆ ಚಾಲನೆ ನೀಡಿದ್ದಾರೆ (Kalaburagi District Deputy Commissioner Yashwant Gurikar).

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಗ್ರಾಮವಾಸ್ತವ್ಯ ಹಿನ್ನೆಲೆಯಲ್ಲಿ ಮುಂಜಾನೆ ಭೀಮಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸೂಟು ಬೂಟು ಬಿಟ್ಟು, ಜಿಲ್ಲಾಧಿಕಾರಿ ಹಮ್ಮುಬಿಮ್ಮು ಪಕ್ಕಕ್ಕಿಟ್ಟು ಪಂಚೆ ತೊಟ್ಟು, ಟಾಂಗಾದಲ್ಲಿ ಗ್ರಾಮಕ್ಕೆ ಎಂಟ್ರಿ ಕೊಟ್ಟರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೋಳಿಗೆ ಹಿಡಿದು ಸಂಚರಿಸಿದ್ದು ವಿಶೇಷವಾಗಿತ್ತು. ಅಷ್ಟಕ್ಕೂ ಜಿಲ್ಲಾಧಿಕಾರಿ ಜೋಳಿಗೆ ಹಿಡಿದು ಗ್ರಾಮದಲ್ಲಿ ಸಂಚರಿಸಿದ್ದು ಪುಸ್ತಕಗಳಿಗಾಗಿ.

ನೀವು ಓದಿ ಮುಗಿಸಿರುವ ಪುಸ್ತಕಗಳು ಮನೆಯಲ್ಲಿ ಇದ್ರೆ ದಾನ ಮಾಡಿ: ಹೌದು ಭೀಮಳ್ಳಿ ಗ್ರಾಮದಲ್ಲಿ ಜೋಳಿಗೆ ಹಿಡಿದು ಗ್ರಾಮದಲ್ಲಿ ಅಡ್ಡಾಡಿದ ಜಿಲ್ಲಾಧಿಕಾರಿ ಯಶವಂತ್, ನಿಮ್ಮ ಮನೆಯಲ್ಲಿ ನೀವು ಓದಿ ಮುಗಿಸಿರುವ ಪುಸ್ತಕಗಳು ಇದ್ರೆ ಅವುಗಳನ್ನು ದಾನದ ರೂಪದಲ್ಲಿ ನೀಡಿ ಅಂತ ಜನರಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿ ಮನವಿಗೆ ಸ್ಪಂಧಿಸಿದ ಗ್ರಾಮದ ಕೆಲವರು ತಮ್ಮಲ್ಲಿದ್ದ ಪುಸ್ತಕಗಳನ್ನು ದಾನ ಮಾಡಿದ್ರು. ಜನರಿಂದ ಸಂಗ್ರಹಿಸಿದ ಪುಸ್ತಕಗಳನ್ನು ಗ್ರಾಮದಲ್ಲಿನ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ನೀಡಿದರು.

ಗ್ರಾಮೀಣ ಭಾಗದ ಜನರು ಓದುವ ಹವ್ಯಾಸ ಬಳಸಿಕೊಳ್ಳಬೇಕು. ಗ್ರಾಮದಲ್ಲಿನ ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದಬೇಕು. ವಿದ್ಯಾರ್ಥಿಗಳು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಓದುವ ಗುಣ ಬೆಳಸಿಕೊಳ್ಳಬೇಕು ಅಂತ ಜಿಲ್ಲಾಧಿಕಾರಿ ಗ್ರಾಮದ ಜನರಲ್ಲಿ ಮನವಿ ಮಾಡಿದರು.

Published On - 2:32 pm, Sat, 19 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ