AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ. 2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. […]

ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 15, 2020 | 11:46 AM

Share

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ.

2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. 2016ರಲ್ಲಿ ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರಬಂದ ಸುಭಾಷ್ ಪಾಟೀಲ್, 14 ವರ್ಷದ ಹಿಂದೆ ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್ ಕೋರ್ಸ್​ಗೆ ಸೇರ್ಪಡೆಯಾಗಿದ್ದಾರೆ.

ಇಂದು ಸಂಜೆ ಪದವಿ ಪಡೆಯಲಿರುವ ಸುಭಾಷ್: ಕಲಬುರಗಿ ನಗರದಲ್ಲಿರುವ MRMC ಮೆಡಿಕಲ್ ಕಾಲೇಜಿಗೆ ಸೇರಿದ ಸುಭಾಷ್, 3 ವರ್ಷ ನಿರಂತರವಾಗಿ ಅಧ್ಯಯನ ಮಾಡಿ ಇದೀಗ ಎಂಬಿಬಿಎಸ್ ಕೋರ್ಸ್ ಕಂಪ್ಲೀಟ್ ಮಾಡಿದ್ದಾರೆ. 2019ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ, 1 ವರ್ಷ ಇಂಟರ್ನ್‌ಶಿಪ್ ಸಹ ಪೂರ್ಣಗೊಳಿಸಿದ್ದಾರೆ. ಕೋರ್ಸ್​ ಕಂಪ್ಲೀಟ್ ಆದ ಕಾರಣ ಇಂದು ಸಂಜೆ ಕಾಲೇಜಿನಲ್ಲಿ ಪದವಿ ಪಡೆಯಲಿದ್ದಾರೆ.

ಡಾ.ಸುಭಾಷ್ ಪಾಟೀಲ್, ಮುಂದೆ ತನ್ನದೆ ಆದ ಕ್ಲಿನಿಕ್ ಪ್ರಾರಂಭಿಸಿ, ಕೈದಿಗಳ ಕುಟುಂಬದವರಿಗೆ ಹಾಗೂ ಯೋಧರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆಯನ್ನು ನೀಡುವ ಮಹದಾಸೆ ಹೊಂದಿದ್ದಾರೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ