AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ. 2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. […]

ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!
ಸಾಧು ಶ್ರೀನಾಥ್​
|

Updated on: Feb 15, 2020 | 11:46 AM

Share

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ.

2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. 2016ರಲ್ಲಿ ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರಬಂದ ಸುಭಾಷ್ ಪಾಟೀಲ್, 14 ವರ್ಷದ ಹಿಂದೆ ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್ ಕೋರ್ಸ್​ಗೆ ಸೇರ್ಪಡೆಯಾಗಿದ್ದಾರೆ.

ಇಂದು ಸಂಜೆ ಪದವಿ ಪಡೆಯಲಿರುವ ಸುಭಾಷ್: ಕಲಬುರಗಿ ನಗರದಲ್ಲಿರುವ MRMC ಮೆಡಿಕಲ್ ಕಾಲೇಜಿಗೆ ಸೇರಿದ ಸುಭಾಷ್, 3 ವರ್ಷ ನಿರಂತರವಾಗಿ ಅಧ್ಯಯನ ಮಾಡಿ ಇದೀಗ ಎಂಬಿಬಿಎಸ್ ಕೋರ್ಸ್ ಕಂಪ್ಲೀಟ್ ಮಾಡಿದ್ದಾರೆ. 2019ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ, 1 ವರ್ಷ ಇಂಟರ್ನ್‌ಶಿಪ್ ಸಹ ಪೂರ್ಣಗೊಳಿಸಿದ್ದಾರೆ. ಕೋರ್ಸ್​ ಕಂಪ್ಲೀಟ್ ಆದ ಕಾರಣ ಇಂದು ಸಂಜೆ ಕಾಲೇಜಿನಲ್ಲಿ ಪದವಿ ಪಡೆಯಲಿದ್ದಾರೆ.

ಡಾ.ಸುಭಾಷ್ ಪಾಟೀಲ್, ಮುಂದೆ ತನ್ನದೆ ಆದ ಕ್ಲಿನಿಕ್ ಪ್ರಾರಂಭಿಸಿ, ಕೈದಿಗಳ ಕುಟುಂಬದವರಿಗೆ ಹಾಗೂ ಯೋಧರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆಯನ್ನು ನೀಡುವ ಮಹದಾಸೆ ಹೊಂದಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!