ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ. 2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. […]

ಕೊಲೆ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿದಾತ ಈಗ ಡಾಕ್ಟರ್!
ಸಾಧು ಶ್ರೀನಾಥ್​

Updated on: Feb 15, 2020 | 11:46 AM

ಕಲಬುರಗಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ 14 ವರ್ಷ ಶಿಕ್ಷೆ ಅನುಭವಿಸಿ ಸನ್ನಡತೆಯಿಂದ ಹೊರಬಂದಿದ್ದ ವ್ಯಕ್ತಿ ಈಗ ಡಾಕ್ಟರ್ ಆಗಿದ್ದಾರೆ. ಅಫಜಲಪುರ ತಾಲೂಕಿನ ಬೋಸಗಾ ಗ್ರಾಮದ ಸುಭಾಷ್ ಪಾಟೀಲ್​, ಜೈಲಿನಿಂದ ಹೊರಬಂದ ನಂತರ ತಾನು ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್​ನಲ್ಲಿ ಪದವಿ ಪೂರೈಸಿ ಅಂದು ಕಂಡಿದ್ದ ಕನಸನ್ನು ಇದೀಗ ನನಸು ಮಾಡಿಕೊಂಡಿದ್ದಾರೆ.

2002ರಲ್ಲಿ ಕೊಲೆ ಪ್ರಕರಣದಲ್ಲಿ ಸುಭಾಷ್ ಪಾಟೀಲ್ ಜೈಲು ಪಾಲಾಗಿದ್ದ. ಆಗ ಆತ ಎಂಬಿಬಿಎಸ್ 2ನೇ ವರ್ಷದಲ್ಲಿ ಓದುತ್ತಿದ್ದ. ಜೈಲು ಪಾಲಾದ್ದರಿಂದ ಎಂಬಿಬಿಎಸ್ ಕೋರ್ಸ್​ ಅನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. 2016ರಲ್ಲಿ ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರಬಂದ ಸುಭಾಷ್ ಪಾಟೀಲ್, 14 ವರ್ಷದ ಹಿಂದೆ ಅರ್ಧಕ್ಕೆ ನಿಲ್ಲಿಸಿದ್ದ ಎಂಬಿಬಿಎಸ್ ಕೋರ್ಸ್​ಗೆ ಸೇರ್ಪಡೆಯಾಗಿದ್ದಾರೆ.

ಇಂದು ಸಂಜೆ ಪದವಿ ಪಡೆಯಲಿರುವ ಸುಭಾಷ್:
ಕಲಬುರಗಿ ನಗರದಲ್ಲಿರುವ MRMC ಮೆಡಿಕಲ್ ಕಾಲೇಜಿಗೆ ಸೇರಿದ ಸುಭಾಷ್, 3 ವರ್ಷ ನಿರಂತರವಾಗಿ ಅಧ್ಯಯನ ಮಾಡಿ ಇದೀಗ ಎಂಬಿಬಿಎಸ್ ಕೋರ್ಸ್ ಕಂಪ್ಲೀಟ್ ಮಾಡಿದ್ದಾರೆ. 2019ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ, 1 ವರ್ಷ ಇಂಟರ್ನ್‌ಶಿಪ್ ಸಹ ಪೂರ್ಣಗೊಳಿಸಿದ್ದಾರೆ. ಕೋರ್ಸ್​ ಕಂಪ್ಲೀಟ್ ಆದ ಕಾರಣ ಇಂದು ಸಂಜೆ ಕಾಲೇಜಿನಲ್ಲಿ ಪದವಿ ಪಡೆಯಲಿದ್ದಾರೆ.

ಡಾ.ಸುಭಾಷ್ ಪಾಟೀಲ್, ಮುಂದೆ ತನ್ನದೆ ಆದ ಕ್ಲಿನಿಕ್ ಪ್ರಾರಂಭಿಸಿ, ಕೈದಿಗಳ ಕುಟುಂಬದವರಿಗೆ ಹಾಗೂ ಯೋಧರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆಯನ್ನು ನೀಡುವ ಮಹದಾಸೆ ಹೊಂದಿದ್ದಾರೆ.


sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us