AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ​ ಚುನಾವಣೆಗೂ ಕಾಲಿಟ್ಟ ‘ಸೋಶಿಯಲ್​ ಮೀಡಿಯಾ’ ಪ್ರಚಾರ

ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಸೋಶಿಯಲ್​ ಮೀಡಿಯಾ ಬಳಸಿಕೊಳ್ಳಲು ಮುಂದಾಗಿರುವುದು ಗಮನಾರ್ಹ. ಒಂದುವೇಳೆ ಗೆದ್ದವರು ಚುನಾವಣೆಗೂ ಮುನ್ನ ಮೆಸೇಜ್​ನಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ ಅಂದರೆ ಜನರು ಸ್ಕ್ರೀನ್​​ಶಾಟ್ ತೋರಿಸಿ ತಿರುಗೇಟು ಕೊಟ್ಟರೂ ಅಚ್ಚರಿಯಲ್ಲಿ ಬಿಡಿ!

ಗ್ರಾಮ ಪಂಚಾಯತಿ​ ಚುನಾವಣೆಗೂ ಕಾಲಿಟ್ಟ ‘ಸೋಶಿಯಲ್​ ಮೀಡಿಯಾ’ ಪ್ರಚಾರ
ಪ್ರಾತಿನಿಧಿಕ ಚಿತ್ರ
Skanda
|

Updated on:Dec 13, 2020 | 2:27 PM

Share

ಕಲಬುರಗಿ: ರಾಜಕೀಯ ಪಕ್ಷಗಳು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದರಾರ ಮನಗೆಲ್ಲಲು ಸೋಶಿಯಲ್ ಮೀಡಿಯಾಗಳನ್ನು ಬಳಸಿಕೊಳ್ಳುತ್ತಿರುವ ಪರಿಯನ್ನು 2014ರಿಂದ ಈಚೆಗೆ ಹೆಚ್ಚಾಗಿ ಗಮನಿಸುತ್ತಿದ್ದೇವೆ. ಈ ಟ್ರೆಂಡ್ ಇದೀಗ ಗ್ರಾಮ ಪಂಚಾಯತಿ ಚುನಾವಣೆಗೂ ಕಾಲಿಟ್ಟಿದೆ.

ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ತಾವು ಯಾರಿಗೂ ಕಮ್ಮಿಯಿಲ್ಲ ಅಂತಾ ಚುನಾವಣಾ ಪ್ರಚಾರಕ್ಕೆ ಸೋಶಿಯಲ್ ಮೀಡಿಯಾಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಂತೂ ಈಗ ಬಿಸಿಲಿಗಿಂತಲೂ ಬಿಗುವಾಗಿ ಚುನಾವಣಾ ಕಾವು ಏರುತ್ತಿದೆ.

ವಿಶೇಷವೆಂದರೆ ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಯುವಕರು ಸ್ಪರ್ಧೆ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಬೆಳೆಯಬೇಕು, ಸಮಾಜ ಸೇವೆ ಮಾಡಬೇಕು ಎನ್ನುವ ಹುಮ್ಮಸ್ಸು ಇರುವವರು ರಾಜಕೀಯ ಪ್ರವೇಶಕ್ಕೆ ಮೊದಲ ಮೆಟ್ಟಿಲಂತಿರುವ ಗ್ರಾಮ ಪಂಚಾಯತಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಇಂತಹ ಯುವ ಪಡೆ ಇದೀಗ ತಮ್ಮ ಪ್ರಚಾರಕ್ಕೆ ಸೋಶಿಯಲ್ ಮೀಡಿಯಾಗಳನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿರುವುದು ವಿಶೇಷ.

ಕಲಬುರಗಿ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅನೇಕ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವಾಟ್ಸಪ್ ಮತ್ತು ಫೇಸ್​ಬುಕ್ ಮೊರೆ ಹೋಗಿದ್ದಾರೆ. ಗ್ರಾಮದ ಅಭಿವೃದ್ದಿಯೇ ನನ್ನ ಗುರಿ, ನುಡಿದಂತೆ ನಡೆಯುತ್ತೇನೆ, ಅಭಿವೃದ್ದಿ ಮಾಡಿಯೇ ತೀರುತ್ತೇನೆ. ಎಲ್ಲರಂತೆ ನಾನು ಸುಳ್ಳು ಆಶ್ವಾಸನೆ ನೀಡೋದಿಲ್ಲಾ, ಪಂಚಾಯತಿಯ ಎಲ್ಲಾ ಸವಲತ್ತುಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತೇನೆ, ಒಂದೇ ಒಂದು ಅವಕಾಶ ಕೊಡಿ ಎಂಬಿತ್ಯಾದಿ ಸ್ಲೋಗನ್​ಗಳನ್ನು ತಮ್ಮ ಭಾವಚಿತ್ರದೊಂದಿಗೆ ಹಾಕಿಕೊಂಡು ಮತಯಾಚನೆ ಮಾಡುತ್ತಿದ್ದಾರೆ.

ಸ್ಮಾರ್ಟ್​ಫೋನ್​ ಬಳಕೆ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವಂತೆಯೇ ಯುವಕರು ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಸೋಶಿಯಲ್​ ಮೀಡಿಯಾ ಬಳಸಿಕೊಳ್ಳಲು ಮುಂದಾಗಿರುವುದು ಗಮನಾರ್ಹ. ಒಂದುವೇಳೆ ಗೆದ್ದವರು ಚುನಾವಣೆಗೂ ಮುನ್ನ ಮೆಸೇಜ್​ನಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ ಅಂದರೆ ಜನರು ಸ್ಕ್ರೀನ್​​ಶಾಟ್ ತೋರಿಸಿ ತಿರುಗೇಟು ಕೊಟ್ಟರೂ ಅಚ್ಚರಿಯಲ್ಲಿ ಬಿಡಿ! -ಸಂಜಯ್ ಚಿಕ್ಕಮಠ

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ.. ಯಾಕೆ?

Published On - 11:18 am, Sun, 13 December 20

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್