AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೇಸು ಪ್ರತಿಮೆ ಬೇಡ, ಕೊನೆವರೆಗೂ ಹೋರಾಟ ಮಾಡುತ್ತೇವೆ -ಕಲ್ಲಡ್ಕ ಪ್ರಭಾಕರ್

ರಾಮನಗರ: ಕನಕಪುರದ ಕಪಾಲ ಬೆಟ್ಟದಲ್ಲಿ ಉದ್ದೇಶಿತ ಯೇಸು ಪ್ರತಿಮೆ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇಂದು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ, ಆರ್​ಎಸ್​ಎಸ್​ನವರು​ ಕನಕಪುರ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಡಿಕೆ ಸಹೋದರರ ವಿರುದ್ಧ ಕಿಡಿಕಾರಿದರು. ಈಗ ನೀವು ಮಂತ್ರಿಯಾಗಿಲ್ಲ: ಈಗ ನಿಮ್ಮ ಸರ್ಕಾರ ಇಲ್ಲ, ನೀವು ಮಂತ್ರಿಯಾಗಿಲ್ಲ. ಈಗ ನೀವು ಕೇವಲ ಕಂತ್ರಿಯಾಗಿ ಉಳಿದಿದ್ದೀರಿ. ನೀವು ಈಗ ಹೆಲಿಕಾಪ್ಟರ್‌ಗಳಲ್ಲಿ ಹಾರಾಡಬಹುದು. ಕೊನೆಗೆ ನೆಲವೇ ಉಳಿಯುವುದಿಲ್ಲ. ಕೆಟ್ಟ ರಾಜಕಾರಣದ […]

ಯೇಸು ಪ್ರತಿಮೆ ಬೇಡ, ಕೊನೆವರೆಗೂ ಹೋರಾಟ ಮಾಡುತ್ತೇವೆ -ಕಲ್ಲಡ್ಕ ಪ್ರಭಾಕರ್
ಸಾಧು ಶ್ರೀನಾಥ್​
|

Updated on:Jan 13, 2020 | 2:46 PM

Share

ರಾಮನಗರ: ಕನಕಪುರದ ಕಪಾಲ ಬೆಟ್ಟದಲ್ಲಿ ಉದ್ದೇಶಿತ ಯೇಸು ಪ್ರತಿಮೆ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇಂದು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ, ಆರ್​ಎಸ್​ಎಸ್​ನವರು​ ಕನಕಪುರ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಡಿಕೆ ಸಹೋದರರ ವಿರುದ್ಧ ಕಿಡಿಕಾರಿದರು.

ಈಗ ನೀವು ಮಂತ್ರಿಯಾಗಿಲ್ಲ: ಈಗ ನಿಮ್ಮ ಸರ್ಕಾರ ಇಲ್ಲ, ನೀವು ಮಂತ್ರಿಯಾಗಿಲ್ಲ. ಈಗ ನೀವು ಕೇವಲ ಕಂತ್ರಿಯಾಗಿ ಉಳಿದಿದ್ದೀರಿ. ನೀವು ಈಗ ಹೆಲಿಕಾಪ್ಟರ್‌ಗಳಲ್ಲಿ ಹಾರಾಡಬಹುದು. ಕೊನೆಗೆ ನೆಲವೇ ಉಳಿಯುವುದಿಲ್ಲ. ಕೆಟ್ಟ ರಾಜಕಾರಣದ ವಿರುದ್ಧ ನಮ್ಮ ಹೋರಾಟ. ಪಕ್ಕದಲ್ಲಿ ಕೆರೆ ಇದೆ‌‌‌, ಪಾದ್ರಿ ಕೆರೆ ಎಂದು ಹೆಸರಿಡಿ, ಮದರ್ ತೆರೇಸಾ ಏನು ಎಂದು ನಿಮಗೆ ಗೊತ್ತಾ? ಮದರ್ ತೆರೇಸಾರನ್ನ ದೇವರು ಮಾಡಲು ಹೊರಟಿದ್ದಾರೆ. ಅಲ್ಪಸಂಖ್ಯಾತರ ಹೆಸರಲ್ಲಿ ದೇಶವನ್ನು ಲೂಟಿ ಮಾಡುತ್ತಿದ್ದಾರೆ.

ಭೂಮಿ ಆಸೆ ತೋರಿಸಿ ಮತಾಂತರ ನಡೆದಿದೆ: ದೇಶದಲ್ಲಿರೋ ಚರ್ಚ್, ಮಸೀದಿಗಳ ಜಾಗ ಹಿಂದೂಗಳದ್ದು. ನಮ್ಮ ಉದಾರತೆ ನಮ್ಮ ದೌರ್ಬಲ್ಯ ಅಂದುಕೊಂಡಿದ್ದೀರಾ? ಈಗ ಯೇಸು ಕ್ರಿಸ್ತನ ಹೆಸರಿನಲ್ಲಿ‌ ಮೋಸ ಮಾಡುತ್ತಿದ್ದೀರಾ? ಭೂಮಿಯ ಆಸೆ ತೋರಿಸಿ ಮತಾಂತರ ನಡೆದಿದೆ. ಮುಸ್ಲಿಂ, ಕ್ರೈಸ್ತರು, ಎಡಪಕ್ಷದವರು ಸ್ನೇಹಿತರಾಗಿದ್ದಾರೆ. ಮತಾಂತರ ನಮ್ಮೊಳಗೆ ಆದರೆ ಏನೂ ತೊಂದರೆ ಇಲ್ಲ. ಈ ದೇಶ ಕ್ರಿಸ್ತನ ನಾಡಲ್ಲ, ಇದು ಕೃಷ್ಣನ ನಾಡಾಗಿದೆ. ಮತಾಂತರಿಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತೆ. ಮುನೇಶ್ವರ ಬೆಟ್ಟದಲ್ಲಿ ದೇಗುಲ ಕಟ್ಟುತ್ತೇವೆ. ಅಲ್ಲಿ ನಿಮ್ಮ ತಲೆಯನ್ನು ಇಡುವ ಕೆಲಸವನ್ನ ಮಾಡ್ತೇವೆ. ನೀವು ಮುಂದೆ ಶಾಸಕರು, ಸಂಸದರು ಆಗುವುದಿಲ್ಲ. ಡಿಕೆಶಿ ಸೋದರರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊನೆಯವರೆಗೂ ಹೋರಾಟ ಮಾಡ್ತೇವೆ: ಯೇಸುವನ್ನು ಪೂಜೆ ಮಾಡುವವರು ಕೋಮುವಾದಿಗಳು, ಆದರೆ ನಾವು ಕೋಮುವಾದಿಗಳಲ್ಲ. ಎಲ್ಲರನ್ನು ಅಪ್ಪಿಕೊಳ್ಳುವವರು ಒಪ್ಪಿಕೊಳ್ಳುವವರು ಹಿಂದೂಗಳು. ಹಿಂದೂ ಸಮಾಜಕ್ಕೆ ಇರುವ ಒಂದೇ ಒಂದು ದೇಶ ಭಾರತ. ಕನಕಪುರದಲ್ಲಿನ ಮುನೇಶ್ವರ ಬೆಟ್ಟಕ್ಕಾಗಿ ಕೊನೆಯವರೆಗೂ ಹೋರಾಟ ಮಾಡುತ್ತೇವೆಂದು ಕಲ್ಲಡ್ಕ ಪ್ರಭಾಕರ್ ಬಟ್ ಹೇಳಿದರು.

ಬುದ್ಧ, ಪೇಜಾವರ ಶ್ರೀಗಳ ಪ್ರತಿಮೆ ಮಾಡಬಹುದಿತ್ತು: ನಾವು ಶಾಂತಿ ಕದಡಲು ಇಲ್ಲಿಗೆ ಬಂದಿಲ್ಲ. ಸೋನಿಯಾ ಗಾಂಧಿ ಪ್ರತಿಮೆ ಮಾಡಲು ನಮ್ಮ ಅಡ್ಡಿ ಇದೆ. ಆದ್ರೆ, ಮಹಾತ್ಮ ಗಾಂಧಿ ಪ್ರತಿಮೆಗೆ ನಮ್ಮ ಅಡ್ಡಿಯಿಲ್ಲ. ನೀವು ಬುದ್ಧ, ಪೇಜಾವರ ಶ್ರೀಗಳ ಪ್ರತಿಮೆ ಮಾಡಬಹುದಿತ್ತು. ಆದ್ರೆ ನೀವು ಹಿಂದೂ ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿದ್ದೀರ. ಕಪಾಲ ಬೆಟ್ಟದಲ್ಲಿ ಪವಾಡ ನಡೆದಿದೆ. ಹಿಂದೂ ಸಮಾಜವನ್ನ ಒಡೆಯುವ ಕೆಲಸ ನಡೆಯುತ್ತಿದೆ ಎಂದು ಹರಿಹಾಯ್ದರು.

ಬೆಳಗ್ಗೆಯಷ್ಟೇ ಕಲ್ಲಡ್ಕ ಪ್ರಭಾಕರ್ ಭಟ್ ಯಾರೆಂದು ನನಗೆ ತಿಳಿದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಕಲ್ಲಡ್ಕ ಪ್ರಭಾಕರ್ ಭಟ್, ಡಿ.ಕೆ.ಶಿವಕುಮಾರ್​​ಗೆ ನನ್ನ ಪರಿಚಯ ಇಲ್ಲ, ಪರವಾಗಿಲ್ಲ ಎಂದರು.

Published On - 2:32 pm, Mon, 13 January 20

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್