ಯೇಸು ಪ್ರತಿಮೆ ನಿರ್ಮಾಣ ವಿವಾದ: ವರದಿ ನೀಡುವ ಮುನ್ನವೇ ತಹಶೀಲ್ದಾರ್‌ ಎತ್ತಂಗಡಿ

ರಾಮನಗರ: ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದಕ್ಕೆ ಸಂಬಂಧಿಸಿ ಸರ್ಕಾರಕ್ಕೆ ವರದಿ ನೀಡುವ ಮುನ್ನವೇ ತಹಶೀಲ್ದಾರ್ ಎತ್ತಂಗಡಿಯಾಗಿದ್ದಾರೆ. ಕನಕಪುರ ತಹಶೀಲ್ದಾರ್ ಆನಂದಯ್ಯರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಆನಂದಯ್ಯ ಸ್ಥಾನಕ್ಕೆ ಚಾಮರಾಜನಗರ ಜಿಲ್ಲೆ ಯಳಂದೂರು ತಹಶೀಲ್ದಾರ್ ವರ್ಷಾರನ್ನು ಕನಕಪುರಕ್ಕೆ ವರ್ಗಾವಣೆ ಮಾಡಲಾಗಿದೆ. ಯೇಸು ಪ್ರತಿಮೆ ವಿವಾದ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಆರ್.ಅಶೋಕ್ ಸೂಚಿಸಿದ್ದರು. ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಸೂಚನೆ ಮೇರೆಗೆ ಡಿಸೆಂಬರ್ 28ರಂದು ಕಪಾಲ ಬೆಟ್ಟಕ್ಕೆ ಅಧಿಕಾರಿಗಳ […]

ಯೇಸು ಪ್ರತಿಮೆ ನಿರ್ಮಾಣ ವಿವಾದ: ವರದಿ ನೀಡುವ ಮುನ್ನವೇ ತಹಶೀಲ್ದಾರ್‌ ಎತ್ತಂಗಡಿ
ಸಾಧು ಶ್ರೀನಾಥ್​

Updated on: Dec 31, 2019 | 2:31 PM

ರಾಮನಗರ: ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದಕ್ಕೆ ಸಂಬಂಧಿಸಿ ಸರ್ಕಾರಕ್ಕೆ ವರದಿ ನೀಡುವ ಮುನ್ನವೇ ತಹಶೀಲ್ದಾರ್ ಎತ್ತಂಗಡಿಯಾಗಿದ್ದಾರೆ. ಕನಕಪುರ ತಹಶೀಲ್ದಾರ್ ಆನಂದಯ್ಯರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಆನಂದಯ್ಯ ಸ್ಥಾನಕ್ಕೆ ಚಾಮರಾಜನಗರ ಜಿಲ್ಲೆ ಯಳಂದೂರು ತಹಶೀಲ್ದಾರ್ ವರ್ಷಾರನ್ನು ಕನಕಪುರಕ್ಕೆ ವರ್ಗಾವಣೆ ಮಾಡಲಾಗಿದೆ. ಯೇಸು ಪ್ರತಿಮೆ ವಿವಾದ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಆರ್.ಅಶೋಕ್ ಸೂಚಿಸಿದ್ದರು.

ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಸೂಚನೆ ಮೇರೆಗೆ ಡಿಸೆಂಬರ್ 28ರಂದು ಕಪಾಲ ಬೆಟ್ಟಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಎಸಿ ದಾಕ್ಷಾಯಿಣಿ ಜೊತೆ ತಹಶೀಲ್ದಾರ್ ಆನಂದಯ್ಯ ಸೇರಿದಂತೆ ಅಧಿಕಾರಿಗಳ ತಂಡ ಕಪಾಲ ಬೆಟ್ಟಕ್ಕೆ ಭೇಟಿ ನೀಡಿತ್ತು. ಪ್ರಕರಣದ ವರದಿ ಸಲ್ಲಿಕೆ ಜವಾಬ್ದಾರಿ ತಹಶೀಲ್ದಾರ್ ಆನಂದಯ್ಯ ಮೇಲಿತ್ತು ಎನ್ನಲಾಗಿದೆ. ಇದೀಗ ರಾಜ್ಯ ಸರ್ಕಾರ ಆನಂದಯ್ಯರನ್ನ ವರ್ಗಾವಣೆ ಮಾಡಿ ಆದೇಶ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

Published On - 8:58 am, Tue, 31 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us