AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಹೇಳನಕಾರಿ ಟ್ವೀಟ್ ಪ್ರಕರಣ​: ಕಂಗನಾ ರಣಾವತ್​ಗೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆ!

ಕಾಂಟ್ರವರ್ಸಿ ಕ್ವೀನ್​, ನಟಿ ಕಂಗನಾ ರಣಾವತ್​ ಎದುರಿಸುತ್ತಿರುವ ಆರೋಪಗಳು ಒಂದೆರಡಲ್ಲ. ಕರ್ನಾಟಕದಲ್ಲಿಯೂ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದಿಂದ ತಪ್ಪಿಸಿಕೊಳ್ಳಲು ಕಂಗನಾ ಮಾಡಿದ ಪ್ರಯತ್ನ ಸದ್ಯಕ್ಕೆ ಫಲ ನೀಡಿಲ್ಲ.

ಅವಹೇಳನಕಾರಿ ಟ್ವೀಟ್ ಪ್ರಕರಣ​: ಕಂಗನಾ ರಣಾವತ್​ಗೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆ!
ಕಂಗನಾ ರಣಾವತ್
ರಾಜೇಶ್ ದುಗ್ಗುಮನೆ
|

Updated on:Mar 02, 2021 | 6:39 PM

Share

ತಮ್ಮ ವಿರುದ್ಧ ತುಮಕೂರಿನಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ತಡೆ ನೀಡಬೇಕು ಎಂದು ನಟಿ ಕಂಗನಾ ರಣಾವತ್​ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಹೊಸ ರೈತ ಮಸೂದೆಯನ್ನು ವಿರೋಧಿಸುವವರನ್ನು ಭಯೋತ್ಪಾದಕರು ಎಂದು ಟ್ವೀಟ್​ ಮಾಡಿದ್ದ ಕಂಗನಾ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದರು.

”ಸಿಎಎ ವಿರುದ್ಧ ವದಂತಿ ಮತ್ತು ತಪ್ಪು ಮಾಹಿತಿಯನ್ನು ಹಬ್ಬಿಸಿ ದಂಗೆಗೆ ಕಾರಣರಾದ ಜನರೇ ಈಗ ರೈತ ಮಸೂದೆ ಬಗ್ಗೆ ತಪ್ಪು ಮಾಹಿತಿ ಹರಡುತ್ತ, ದೇಶದಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಅವರು ಭಯೋತ್ಪಾದಕರು” ಎಂದು ಕಂಗನಾ ರಣಾವತ್​ ಟ್ವೀಟ್ ಮಾಡಿದ್ದರು. ಈ ಬಗ್ಗೆ ತುಮಕೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್​ನಲ್ಲಿ ಕಂಗನಾ ಮನವಿ ಸಲ್ಲಿಸಿದ್ದರು.

ಈ ಪ್ರಕರಣದ ಸಂಬಂಧ ಕಂಗನಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯು ಸರಿಯಾದ ಪ್ರಕಾರದಲ್ಲಿ ಇಲ್ಲ ಎಂದು ಕರ್ನಾಟಕ ಹೈಕೋರ್ಟ್​ ತಿಳಿಸಿದೆ. ‘ಮೊದಲು ನೀವು ಸರಿಯಾದ ರೀತಿಯಲ್ಲಿ ಮಾಹಿತಿ ಒದಗಿಸಿ. ನಂತರ ನಿಮ್ಮ ಅರ್ಜಿಯನ್ನು ಪರಿಗಣಿಸಲಾಗುವುದು’ ಎಂದು ಕಂಗನಾ ಪರ ವಕೀಲರಿಗೆ ಕೋರ್ಟ್​ ಸೂಚಿಸಿದೆ.

ಇದಲ್ಲದೆ, ಮುಂಬೈನಲ್ಲಿಯೂ ಕಂಗನಾ ಮತ್ತು ಅವರ ಸಹೋದರಿ ರಂಗೋಲಿ ಚಂಡೇಲ್​ ವಿರುದ್ಧ ನಾಲ್ಕು ಕ್ರಿಮಿನಲ್​ ಪ್ರಕರಣ ದಾಖಲಾಗಿವೆ. ಆದರೆ ಈ ಪ್ರಕರಣಗಳನ್ನು ಶಿಮ್ಲಾಗೆ ವರ್ಗಾವಣೆ ಮಾಡಬೇಕು ಎಂದು ಕೋರಿ ಕಂಗನಾ ಸುಪ್ರೀಂ ಕೋರ್ಟ್​ನ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಕೇಸ್: ಪ್ರಕರಣ ರದ್ದು ಕೋರಿ ನಟಿ ಕಂಗನಾರಿಂದ ಹೈಕೋರ್ಟ್‌ಗೆ ಅರ್ಜಿ

Published On - 6:37 pm, Tue, 2 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ