‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ; ರಿಲೀಸ್ ಆಗಲ್ಲ ಕಂಗನಾ ರಣಾವತ್ ಸಿನಿಮಾ?

ಕಂಗನಾ ರಣಾವತ್ ಅವರು ‘ಎಮರ್ಜೆನ್ಸಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್​ ಆಗಲಿದೆ. ಸಿನಿಮಾ ಬಗ್ಗೆ ಸಿಖ್ ಸಮುದಾಯವರು ಈಗ ಅಪಸ್ವರ ತೆಗೆದಿದ್ದಾರೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ; ರಿಲೀಸ್ ಆಗಲ್ಲ ಕಂಗನಾ ರಣಾವತ್ ಸಿನಿಮಾ?
ಎಮರ್ಜೆನ್ಸಿ ಸಿನಿಮಾ
Follow us
|

Updated on:Aug 22, 2024 | 12:16 PM

ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್ ವಾರದ ಹಿಂದಷ್ಟೇ ರಿಲೀಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ವಿವಾದ ಮಾಡುವ ಸೂಚನೆ ನೀಡಿತ್ತು. ಈಗ ಸಿನಿಮಾ ಮೇಲೆ ಬ್ಯಾನ್ ಹೇರುವಂತೆ ಅಕಲಾ ತಕ್ತ್ ಹಾಗೂ ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ (ಎಸ್​ಜಿಪಿಸಿ) ಒತ್ತಾಯ ಮಾಡಿದೆ. ಸಿಖ್ ವ್ಯಕ್ತಿಗಳನ್ನು ತಪ್ಪಾಗಿ ತೋರಿಸಲಾಗಿದೆ ಮತ್ತು ಸಮುದಾಯದ ಇತಿಹಾಸವನ್ನು ಅಗೌರವಿಸುವ ಕೆಲಸ ಆಗಿದೆ ಎಂದು ಸಮಿತಿಯವರು ಹೇಳಿದ್ದಾರೆ.

ಎಸ್​ಜಿಪಿಸಿ ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಮಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಎಮರ್ಜೆನ್ಸಿ ಸಿನಿಮಾ ಸಿಖ್ ಸಮುದಾಯವನ್ನು ಕೆಟ್ಟದಾಗಿ ತೋರಿಸಲಾಗಿದೆ. ಸಿಖ್ ಸಮುದಾಯದವರಿಗೆ ಮಸಿ ಬಳಿಯುವ ಕೆಲಸ ಆಗಿದೆ. ಜರ್ನೈಲ್ ಸಿಂಗ್ ಬಿಂದ್ರನ್​ವಾಲೆ ಅವರನ್ನು ನಾವು ಹುತಾತ್ಮ ಎಂದು ಪರಿಗಣಿಸಿದ್ದೇವೆ’ ಎಂಬುದಾಗಿ ಅವರು ಮಾತನಾಡಿದ್ದಾರೆ.

1975ರಲ್ಲಿ ತುರ್ತು ಪರಿಸ್ಥಿತಿ ಹೇರಲಾಯಿತು. ಇದನ್ನು ಆಧರಿಸಿ ಕಂಗನಾ ಸಿನಿಮಾ ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಾಜಕೀಯ ಜೀವನ, ಅವರು ಎದುರಿಸಿದ ಸವಾಲುಗಳನ್ನು ತೋರಿಸಲಾಗಿದೆ. ಈ ಟ್ರೇಲರ್​ನ ಸಿಖ್ ಸಮುದಾಯವರು ಇಷ್ಟಪಟ್ಟಿಲ್ಲ. ಈಗಾಗಲೇ ಎಸ್​ಜಿಪಿಸಿ ಅವರು ಕಂಗನಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅವರ ವಿರುದ್ಧ ಎಫ್​ಐಆರ್​ಗೆ ಆಗ್ರಹಿಸಲಾಗಿದೆ.

‘ಸಿನಿಮಾಗಳಲ್ಲಿ ನಮ್ಮ ಇತಿಹಾಸವನ್ನು ತಪ್ಪಾಗಿ ಚಿತ್ರಿಸುವುದರಿಂದ ಸಿಖ್ ಸಮುದಾಯವು ಪದೇ ಪದೇ ನೋವುಂಟುಮಾಡುತ್ತಿದೆ. ಭವಿಷ್ಯದಲ್ಲಿ ಇಂತಹ ಸಿನಿಮಾಗಳನ್ನು ತಡೆಯಬೇಕು. ಭಾರತೀಯ ಚಿತ್ರರಂಗದಲ್ಲಿ ಸಿಖ್ ಭಾವನೆಗಳನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳಲು ಸಿಖ್ ಸದಸ್ಯರನ್ನು ಸೆನ್ಸಾರ್ ಮಂಡಳಿಯಲ್ಲಿ ಸೇರ್ಪಡೆ ಮಾಡಬೇಕು’ ಎಂದು ಎಜ್​ಪಿಸಿ ಮುಖ್ಯಸ್ಥ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 6ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Thu, 22 August 24

ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ