ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್?: ಬಾಲಿವುಡ್​ ಅಂಗಳದಿಂದ ಹೊರ ಬಿತ್ತು ಹೊಸ ಸುದ್ದಿ​

ಸದ್ಯ ‘ಧಕಾಡ್’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿರುವ ಕಂಗನಾ, ‘ಅಪರಾಜಿತ ಅಯೋಧ್ಯ’, ‘ಮಣಿಕರ್ಣಿಕಾ ರಿಟರ್ನ್ಸ್’ ಕೆಲಸಗಳಲ್ಲೂ ಬ್ಯುಸಿಯಾಗಿದ್ದಾರೆ.

ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್?: ಬಾಲಿವುಡ್​ ಅಂಗಳದಿಂದ ಹೊರ ಬಿತ್ತು ಹೊಸ ಸುದ್ದಿ​
ನಟಿ ಕಂಗನಾ
Follow us
| Updated By: ganapathi bhat

Updated on:Apr 06, 2022 | 8:31 PM

ನಟಿ ಕಂಗನಾ ರಣಾವತ್, ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಬಾಲಿವುಡ್​ ಅಂಗಳದಲ್ಲಿ ಹರಿದಾಡಿದೆ. ಪೊಲಿಟಿಕಲ್ ಡ್ರಾಮಾ ಶೈಲಿಯಲ್ಲಿ ಸಿನಿಮಾ ಮೂಡಿ ಬರಲಿದ್ದು, ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಸಿನಿಮಾ ಬಯೋಪಿಕ್ ಅಲ್ಲ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸಾಮಾಜಿಕ ಹಾಗೂ ರಾಜಕೀಯ ವಿಚಾರಗಳ ಬಗ್ಗೆ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುವ ಕಂಗನಾ, ಸಿನಿಮಾ ಆಯ್ಕೆಯಲ್ಲೂ ಚೂಸಿಯಾಗಿದ್ದಾರೆ. ಸದ್ಯ ‘ಧಕಾಡ್’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿರುವ ಕಂಗನಾ, ‘ಅಪರಾಜಿತ ಅಯೋಧ್ಯ’, ‘ಮಣಿಕರ್ಣಿಕಾ ರಿಟರ್ನ್ಸ್’ ಕೆಲಸಗಳಲ್ಲೂ ಬ್ಯುಸಿಯಾಗಿದ್ದಾರೆ.

ಪೊಲಿಟಿಕಲ್ ಡ್ರಾಮಾ, ಪೀರಿಯಾಡಿಕ್ ಸಿನಿಮಾ ಒಂದಕ್ಕೆ ನಾವು ಕೆಲಸ ಮಾಡುತ್ತಿದ್ದೇವೆ. ಚಿತ್ರದ ಸ್ಕ್ರಿಪ್ಟ್ ಕೆಲಸ ಅಂತಿಮ ಹಂತದಲ್ಲಿದೆ. ಈಗಿನ ಸಾಮಾಜಿಕ-ರಾಜಕೀಯ ಸ್ಥಿತಿಗತಿಗಳನ್ನು ಅರ್ಥಮಾಡಿಕೊಳ್ಳಲು ಈ ಸಿನಿಮಾ ಸಹಕಾರಿಯಾಗಲಿದೆ. ನಾನು ಭಾರತದ ಇತಿಹಾಸ ಕಂಡ ಐಕಾನಿಕ್ ನಾಯಕಿಯೊಬ್ಬರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಕಾತುರಳಾಗಿದ್ದೇನೆ. ಆದರೆ, ಇದು ಇಂದಿರಾ ಗಾಂಧಿ ಬಯೋಪಿಕ್ ಅಲ್ಲ ಎಂದು ಕಂಗನಾ ಹೇಳಿಕೆ ನೀಡಿದ್ದಾರೆ. ಚಿತ್ರದಲ್ಲಿ ಬಹಳಷ್ಟು ಪ್ರಮುಖ ನಟರು ಕಾಣಿಸಿಕೊಳ್ಳಲಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

‘ರಿವಾಲ್ವರ್ ರಾಣಿ’ ಚಿತ್ರದಲ್ಲಿ ಕಂಗನಾ ಜೊತೆ ಕೆಲಸ ಮಾಡಿದ್ದ, ಸಾಯಿ ಕಬೀರ್ ಈ ಸಿನಿಮಾವನ್ನು ಬರೆದು, ನಿರ್ದೇಶಿಸಲಿದ್ದಾರೆ. ಒಂದು ಪುಸ್ತಕ ಆಧಾರಿತ ಸಿನಿಮಾ ಇದಾಗಿರಲಿದೆ ಎಂದು ಕಂಗನಾ ತಿಳಿಸಿದ್ದಾರೆ. ಕಂಗನಾ ರಣಾವತ್ ಸ್ವತಃ ಸಿನಿಮಾ ನಿರ್ಮಾಣ ಮಾಡಲಿರುವ ಬಗ್ಗೆಯೂ ಮಾಹಿತಿ ದೊರಕಿದೆ. ಚಿತ್ರದಲ್ಲಿ, ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಮೊರಾರ್ಜಿ ದೇಸಾಯಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಪಾತ್ರಗಳು ಇರಲಿವೆ ಎಂದು ತಿಳಿದುಬಂದಿದೆ.

ಗೃಹಿಣಿಯರಿಗೆ ಸಂಬಳ: ಕಮಲ್ ಹಾಸನ್, ಶಶಿ ತರೂರ್ ಯೋಚನೆಗೆ ಕಂಗನಾ ವಿರೋಧ

Published On - 7:55 pm, Fri, 29 January 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ