AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್?: ಬಾಲಿವುಡ್​ ಅಂಗಳದಿಂದ ಹೊರ ಬಿತ್ತು ಹೊಸ ಸುದ್ದಿ​

ಸದ್ಯ ‘ಧಕಾಡ್’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿರುವ ಕಂಗನಾ, ‘ಅಪರಾಜಿತ ಅಯೋಧ್ಯ’, ‘ಮಣಿಕರ್ಣಿಕಾ ರಿಟರ್ನ್ಸ್’ ಕೆಲಸಗಳಲ್ಲೂ ಬ್ಯುಸಿಯಾಗಿದ್ದಾರೆ.

ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್?: ಬಾಲಿವುಡ್​ ಅಂಗಳದಿಂದ ಹೊರ ಬಿತ್ತು ಹೊಸ ಸುದ್ದಿ​
ನಟಿ ಕಂಗನಾ
TV9 Web
| Edited By: |

Updated on:Apr 06, 2022 | 8:31 PM

Share

ನಟಿ ಕಂಗನಾ ರಣಾವತ್, ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಬಾಲಿವುಡ್​ ಅಂಗಳದಲ್ಲಿ ಹರಿದಾಡಿದೆ. ಪೊಲಿಟಿಕಲ್ ಡ್ರಾಮಾ ಶೈಲಿಯಲ್ಲಿ ಸಿನಿಮಾ ಮೂಡಿ ಬರಲಿದ್ದು, ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಸಿನಿಮಾ ಬಯೋಪಿಕ್ ಅಲ್ಲ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಸಾಮಾಜಿಕ ಹಾಗೂ ರಾಜಕೀಯ ವಿಚಾರಗಳ ಬಗ್ಗೆ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುವ ಕಂಗನಾ, ಸಿನಿಮಾ ಆಯ್ಕೆಯಲ್ಲೂ ಚೂಸಿಯಾಗಿದ್ದಾರೆ. ಸದ್ಯ ‘ಧಕಾಡ್’ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿರುವ ಕಂಗನಾ, ‘ಅಪರಾಜಿತ ಅಯೋಧ್ಯ’, ‘ಮಣಿಕರ್ಣಿಕಾ ರಿಟರ್ನ್ಸ್’ ಕೆಲಸಗಳಲ್ಲೂ ಬ್ಯುಸಿಯಾಗಿದ್ದಾರೆ.

ಪೊಲಿಟಿಕಲ್ ಡ್ರಾಮಾ, ಪೀರಿಯಾಡಿಕ್ ಸಿನಿಮಾ ಒಂದಕ್ಕೆ ನಾವು ಕೆಲಸ ಮಾಡುತ್ತಿದ್ದೇವೆ. ಚಿತ್ರದ ಸ್ಕ್ರಿಪ್ಟ್ ಕೆಲಸ ಅಂತಿಮ ಹಂತದಲ್ಲಿದೆ. ಈಗಿನ ಸಾಮಾಜಿಕ-ರಾಜಕೀಯ ಸ್ಥಿತಿಗತಿಗಳನ್ನು ಅರ್ಥಮಾಡಿಕೊಳ್ಳಲು ಈ ಸಿನಿಮಾ ಸಹಕಾರಿಯಾಗಲಿದೆ. ನಾನು ಭಾರತದ ಇತಿಹಾಸ ಕಂಡ ಐಕಾನಿಕ್ ನಾಯಕಿಯೊಬ್ಬರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಕಾತುರಳಾಗಿದ್ದೇನೆ. ಆದರೆ, ಇದು ಇಂದಿರಾ ಗಾಂಧಿ ಬಯೋಪಿಕ್ ಅಲ್ಲ ಎಂದು ಕಂಗನಾ ಹೇಳಿಕೆ ನೀಡಿದ್ದಾರೆ. ಚಿತ್ರದಲ್ಲಿ ಬಹಳಷ್ಟು ಪ್ರಮುಖ ನಟರು ಕಾಣಿಸಿಕೊಳ್ಳಲಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

‘ರಿವಾಲ್ವರ್ ರಾಣಿ’ ಚಿತ್ರದಲ್ಲಿ ಕಂಗನಾ ಜೊತೆ ಕೆಲಸ ಮಾಡಿದ್ದ, ಸಾಯಿ ಕಬೀರ್ ಈ ಸಿನಿಮಾವನ್ನು ಬರೆದು, ನಿರ್ದೇಶಿಸಲಿದ್ದಾರೆ. ಒಂದು ಪುಸ್ತಕ ಆಧಾರಿತ ಸಿನಿಮಾ ಇದಾಗಿರಲಿದೆ ಎಂದು ಕಂಗನಾ ತಿಳಿಸಿದ್ದಾರೆ. ಕಂಗನಾ ರಣಾವತ್ ಸ್ವತಃ ಸಿನಿಮಾ ನಿರ್ಮಾಣ ಮಾಡಲಿರುವ ಬಗ್ಗೆಯೂ ಮಾಹಿತಿ ದೊರಕಿದೆ. ಚಿತ್ರದಲ್ಲಿ, ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಮೊರಾರ್ಜಿ ದೇಸಾಯಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಪಾತ್ರಗಳು ಇರಲಿವೆ ಎಂದು ತಿಳಿದುಬಂದಿದೆ.

ಗೃಹಿಣಿಯರಿಗೆ ಸಂಬಳ: ಕಮಲ್ ಹಾಸನ್, ಶಶಿ ತರೂರ್ ಯೋಚನೆಗೆ ಕಂಗನಾ ವಿರೋಧ

Published On - 7:55 pm, Fri, 29 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ