AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ

ಪ್ರತಿಬಾರಿ ಹಬ್ಬದ ದಿನ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಕಾರ್ಯಕ್ರಮಗಳೊಂದಿಗೆ ವೀಕ್ಷಕರ ಎದುರು ಬರುತ್ತದೆ. ಈ ಬಾರಿ ಅವರು ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ಹೆಸರಲ್ಲಿ ವೀಕ್ಷಕರ ಎದುರು ಬಂದಿದ್ದಾರೆ. ಈ

‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ
‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ
TV9 Web
| Edited By: |

Updated on: Sep 08, 2021 | 8:36 PM

Share

ಕನ್ನಡ ಬಿಗ್​ ಬಾಸ್​ ಪೂರ್ಣಗೊಂಡು ಇಂದಿಗೆ (ಸೆಪ್ಟೆಂಬರ್​ 8) ಒಂದು ತಿಂಗಳು ಪೂರ್ಣಗೊಂಡಿದೆ. ಆದಾಗ್ಯೂ ಈ ಶೋನ ಹವಾ ಕಡಿಮೆ ಆಗಿಲ್ಲ. ನಾನಾ ಕಾರಣಗಳಿಗೆ ಸೀಸನ್​ 8ರ ಸ್ಪರ್ಧಿಗಳು ಮತ್ತೆ ಟಿವಿ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮಿನಿ ಸೀಸನ್​ ಕೊನೆಯ ದಿನ ಸೀಸನ್​ 8ರ ಸ್ಪರ್ಧಿಗಳು ವೇದಿಕೆ ಏರಿದ್ದರು. ಈಗ ಬಿಗ್​ ಬಾಸ್​ ಸೀಸನ್​ 8ಅನ್ನು ಮರುಸೃಷ್ಟಿ ಮಾಡಲಾಗಿದೆ. ಇದನ್ನು ನೋಡಿ ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ ಸೇರಿ ಎಲ್ಲಾ ಸ್ಪರ್ಧಿಗಳು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಪ್ರತಿಬಾರಿ ಹಬ್ಬದ ದಿನ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಕಾರ್ಯಕ್ರಮಗಳೊಂದಿಗೆ ವೀಕ್ಷಕರ ಎದುರು ಬರುತ್ತದೆ. ಈ ಬಾರಿ ಅವರು ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ಹೆಸರಲ್ಲಿ ವೀಕ್ಷಕರ ಎದುರು ಬಂದಿದ್ದಾರೆ. ಈ ವೇಳೆ ಬಿಗ್​ ಬಾಸ್​ ಸೀಸನ್​ 8ಅನ್ನು ಮರುಸೃಷ್ಟಿಸಲಾಗಿದೆ. ಇದರ ಪ್ರೋಮೋ ಈಗ ವೈರಲ್​ ಆಗಿದೆ.

‘ಮಜಾ ಭಾರತ’ ರಿಯಾಲಿಟಿ ಶೋ​ ಸ್ಪರ್ಧಿಗಳು ಈ ಮೊದಲು ಎಲ್ಲರನ್ನೂ ನಗಿಸಿದ್ದಾರೆ. ಈ ಬಾರಿ ಅವರು ಬಿಗ್​ ಬಾಸ್ ಸ್ಪರ್ಧಿಗಳ ಅವತಾರ ತಾಳಿದ್ದಾರೆ. ಮಂಜು ಪಾವಗಡ, ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಸೇರಿ ಬಹುತೇಕ ಸ್ಪರ್ಧಿಗಳ ಅವತಾರವನ್ನು ಹೊತ್ತು ಬಂದಿದ್ದಾರೆ ‘ಮಜಾ ಭಾರತ’ ಸ್ಪರ್ಧಿಗಳು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಪ್ರೋಮೋ ಹಂಚಿಕೊಂಡಿದೆ. ಇದನ್ನು ನೋಡಿ ಸಾಕಷ್ಟು ಮಂದಿ ಮನಃಪೂರ್ವಕವಾಗಿ ನಕ್ಕಿದ್ದಾರೆ.

ಸೀಸನ್​ 8ರಲ್ಲಿ ಮಾವ ಎನ್ನುವ ಶಬ್ದ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಪ್ರಶಾಂತ್​ ಅವರನ್ನು ಮಂಜು ಪಾವಗಡ ಮಾವ ಎಂದು ಕರೆಯುತ್ತಿದ್ದರು. ಇದು ಪ್ರಶಾಂತ್​ ಕೋಪಕ್ಕೆ ಕಾರಣವಾಗಿತ್ತು. ಮಾವ ಎನ್ನುವ ಶಬ್ದಕ್ಕೆ ಬೇರೆಯದೇ ಅರ್ಥವಿದೆ ಎಂದು ವಾದಿಸಿದ್ದರು ಪ್ರಶಾಂತ್​. ಇದು ದೊಡ್ಡ ಜಗಳಕ್ಕೆ ಕಾರಣವಾಗಿತ್ತು. ಈ ಘಟನೆಯನ್ನು ಮಜಾ ಭಾರತ​ ಮಂದಿ ಮರು ಸೃಷ್ಟಿ ಮಾಡಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 10) ಮಧ್ಯಾಹ್ನ ಈ ಶೋ ಪ್ರಸಾರವಾಗಲಿದೆ.

ಇದನ್ನೂ ಓದಿ: ‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?