AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ

ಪ್ರತಿಬಾರಿ ಹಬ್ಬದ ದಿನ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಕಾರ್ಯಕ್ರಮಗಳೊಂದಿಗೆ ವೀಕ್ಷಕರ ಎದುರು ಬರುತ್ತದೆ. ಈ ಬಾರಿ ಅವರು ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ಹೆಸರಲ್ಲಿ ವೀಕ್ಷಕರ ಎದುರು ಬಂದಿದ್ದಾರೆ. ಈ

‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ
‘ಬಿಗ್​ ಬಾಸ್​ ಸೀಸನ್​ 8’ ಮರುಸೃಷ್ಟಿ; ಇದನ್ನು ನೋಡಿದ್ರೆ ನೀವು ನಗೋದು ಗ್ಯಾರಂಟಿ
TV9 Web
| Edited By: |

Updated on: Sep 08, 2021 | 8:36 PM

Share

ಕನ್ನಡ ಬಿಗ್​ ಬಾಸ್​ ಪೂರ್ಣಗೊಂಡು ಇಂದಿಗೆ (ಸೆಪ್ಟೆಂಬರ್​ 8) ಒಂದು ತಿಂಗಳು ಪೂರ್ಣಗೊಂಡಿದೆ. ಆದಾಗ್ಯೂ ಈ ಶೋನ ಹವಾ ಕಡಿಮೆ ಆಗಿಲ್ಲ. ನಾನಾ ಕಾರಣಗಳಿಗೆ ಸೀಸನ್​ 8ರ ಸ್ಪರ್ಧಿಗಳು ಮತ್ತೆ ಟಿವಿ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮಿನಿ ಸೀಸನ್​ ಕೊನೆಯ ದಿನ ಸೀಸನ್​ 8ರ ಸ್ಪರ್ಧಿಗಳು ವೇದಿಕೆ ಏರಿದ್ದರು. ಈಗ ಬಿಗ್​ ಬಾಸ್​ ಸೀಸನ್​ 8ಅನ್ನು ಮರುಸೃಷ್ಟಿ ಮಾಡಲಾಗಿದೆ. ಇದನ್ನು ನೋಡಿ ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ ಸೇರಿ ಎಲ್ಲಾ ಸ್ಪರ್ಧಿಗಳು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಪ್ರತಿಬಾರಿ ಹಬ್ಬದ ದಿನ ಕಲರ್ಸ್​ ಕನ್ನಡ ವಾಹಿನಿ ವಿಶೇಷ ಕಾರ್ಯಕ್ರಮಗಳೊಂದಿಗೆ ವೀಕ್ಷಕರ ಎದುರು ಬರುತ್ತದೆ. ಈ ಬಾರಿ ಅವರು ‘ಬಿಗ್​ ಗಣೇಶೋತ್ಸವ’ ಕಾರ್ಯಕ್ರಮದ ಹೆಸರಲ್ಲಿ ವೀಕ್ಷಕರ ಎದುರು ಬಂದಿದ್ದಾರೆ. ಈ ವೇಳೆ ಬಿಗ್​ ಬಾಸ್​ ಸೀಸನ್​ 8ಅನ್ನು ಮರುಸೃಷ್ಟಿಸಲಾಗಿದೆ. ಇದರ ಪ್ರೋಮೋ ಈಗ ವೈರಲ್​ ಆಗಿದೆ.

‘ಮಜಾ ಭಾರತ’ ರಿಯಾಲಿಟಿ ಶೋ​ ಸ್ಪರ್ಧಿಗಳು ಈ ಮೊದಲು ಎಲ್ಲರನ್ನೂ ನಗಿಸಿದ್ದಾರೆ. ಈ ಬಾರಿ ಅವರು ಬಿಗ್​ ಬಾಸ್ ಸ್ಪರ್ಧಿಗಳ ಅವತಾರ ತಾಳಿದ್ದಾರೆ. ಮಂಜು ಪಾವಗಡ, ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್​, ಪ್ರಶಾಂತ್​ ಸಂಬರಗಿ ಸೇರಿ ಬಹುತೇಕ ಸ್ಪರ್ಧಿಗಳ ಅವತಾರವನ್ನು ಹೊತ್ತು ಬಂದಿದ್ದಾರೆ ‘ಮಜಾ ಭಾರತ’ ಸ್ಪರ್ಧಿಗಳು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಪ್ರೋಮೋ ಹಂಚಿಕೊಂಡಿದೆ. ಇದನ್ನು ನೋಡಿ ಸಾಕಷ್ಟು ಮಂದಿ ಮನಃಪೂರ್ವಕವಾಗಿ ನಕ್ಕಿದ್ದಾರೆ.

ಸೀಸನ್​ 8ರಲ್ಲಿ ಮಾವ ಎನ್ನುವ ಶಬ್ದ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಪ್ರಶಾಂತ್​ ಅವರನ್ನು ಮಂಜು ಪಾವಗಡ ಮಾವ ಎಂದು ಕರೆಯುತ್ತಿದ್ದರು. ಇದು ಪ್ರಶಾಂತ್​ ಕೋಪಕ್ಕೆ ಕಾರಣವಾಗಿತ್ತು. ಮಾವ ಎನ್ನುವ ಶಬ್ದಕ್ಕೆ ಬೇರೆಯದೇ ಅರ್ಥವಿದೆ ಎಂದು ವಾದಿಸಿದ್ದರು ಪ್ರಶಾಂತ್​. ಇದು ದೊಡ್ಡ ಜಗಳಕ್ಕೆ ಕಾರಣವಾಗಿತ್ತು. ಈ ಘಟನೆಯನ್ನು ಮಜಾ ಭಾರತ​ ಮಂದಿ ಮರು ಸೃಷ್ಟಿ ಮಾಡಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 10) ಮಧ್ಯಾಹ್ನ ಈ ಶೋ ಪ್ರಸಾರವಾಗಲಿದೆ.

ಇದನ್ನೂ ಓದಿ: ‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ