AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!

ಮಂಡ್ಯ: ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು ಎಂಬಂತೆ ಇಲ್ಲಿಂದ ಉದ್ಯೋಗ ಅರಸಿ ದುಬೈ ಸೇರಿರುವ ಕನ್ನಡಿಗರು ಕನ್ನಡ ಪಾಠ ಶಾಲೆಯನ್ನು ನಡೆಸುತ್ತಿದ್ದಾರೆ. ತಮ್ಮ ಭಾಷಾ ಪ್ರೇಮವನ್ನು ಮರಳುಗಾಡಿನಲ್ಲೂ ಪಸರಿಸಿದ್ದಾರೆ. ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಅಂತ ಊರು ಬಿಟ್ಟ ಬಂದ ಕನ್ನಡಿಗರು ದುಬೈನಲ್ಲಿ ಕನ್ನಡ ಡಿಂಡಿಮವ ಬಾರಿಸಿದ್ದಾರೆ. 6 ವರ್ಷದ ಹಿಂದೆ ಕನ್ನಡ‌ ಮಿತ್ರರು ಅನ್ನೋ ಸಂಘಟನೆ ಹೆಸರಿನಲ್ಲಿ ಕೆಲ ಕನ್ನಡಿಗರು ಸೇರಿಕೊಂಡು ಶಾಲೆ ಆರಂಭಿಸಿದ್ದಾರೆ. 20 ಮಕ್ಕಳಿಂದ […]

ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!
ಆಯೇಷಾ ಬಾನು
|

Updated on:Nov 23, 2020 | 1:07 PM

Share

ಮಂಡ್ಯ: ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು ಎಂಬಂತೆ ಇಲ್ಲಿಂದ ಉದ್ಯೋಗ ಅರಸಿ ದುಬೈ ಸೇರಿರುವ ಕನ್ನಡಿಗರು ಕನ್ನಡ ಪಾಠ ಶಾಲೆಯನ್ನು ನಡೆಸುತ್ತಿದ್ದಾರೆ. ತಮ್ಮ ಭಾಷಾ ಪ್ರೇಮವನ್ನು ಮರಳುಗಾಡಿನಲ್ಲೂ ಪಸರಿಸಿದ್ದಾರೆ.

ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಅಂತ ಊರು ಬಿಟ್ಟ ಬಂದ ಕನ್ನಡಿಗರು ದುಬೈನಲ್ಲಿ ಕನ್ನಡ ಡಿಂಡಿಮವ ಬಾರಿಸಿದ್ದಾರೆ. 6 ವರ್ಷದ ಹಿಂದೆ ಕನ್ನಡ‌ ಮಿತ್ರರು ಅನ್ನೋ ಸಂಘಟನೆ ಹೆಸರಿನಲ್ಲಿ ಕೆಲ ಕನ್ನಡಿಗರು ಸೇರಿಕೊಂಡು ಶಾಲೆ ಆರಂಭಿಸಿದ್ದಾರೆ. 20 ಮಕ್ಕಳಿಂದ ಆರಂಭವಾದ ಈ ಶಾಲೆಯಲ್ಲಿ ಈಗ 310 ಮಕ್ಕಳು ಓದುತ್ತಿದ್ದಾರೆ. ದುಬೈನಲ್ಲೇ ಹುಟ್ಟಿ ಬೆಳೆದ ಮಕ್ಕಳಿಗೆ ಕನ್ನಡ ಕಲಿಸೊ ಉದ್ದೇಶದಿಂದ ಈ ಶಾಲೆಯನ್ನು ಆರಂಭಿಸಲಾಗಿದೆ. ಈ ಶಾಲೆಯಲ್ಲಿನ ಮಕ್ಕಳು ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಹಂತದಲ್ಲಿ ಕನ್ನಡ ಕಲಿಯುತ್ತಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆನ್​ಲೈನ್​ನಲ್ಲಿ ತರಗತಿಯನ್ನು ನಡೆಸಲಾಗುತ್ತಿದೆ. ಇದೇ ತಿಂಗಳ 6 ರಂದು ಸಾಹಿತಿ ಡಾ ಚಂದ್ರಶೇಖರ ಕಂಬಾರ್, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೇರಿದಂತೆ ಹಲವು ಗಣ್ಯರು ಆನ್​ಲೈನ್ ಮೂಲಕ ಆನ್​ಲೈನ್ ತರಗತಿಗೆ ಚಾಲನೆ ನೀಡಿದ್ರು. ಈ ಬಗ್ಗೆ ದುಬೈನಿಂದ ಕನ್ನಡ ಮಿತ್ರ ಸಂಘಟನೆಯ ಮಾಧ್ಯಮ ಸಂಚಾಲಕ ಭಾನುಕುಮಾರ್ ಮಾಹಿತಿ ನೀಡಿದ್ದಾರೆ.

Published On - 3:12 pm, Sun, 1 November 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ