
ಬಳ್ಳಾರಿ: ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ಪ್ರಯುಕ್ತವಾಗಿ ಗಣಿನಾಡು ಬಳ್ಳಾರಿಯಲ್ಲಿ ಸಹ ರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿತು.
ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ರಾಜ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಧ್ವಜಾರೋಹಣ ನೆರವೇರಿಸಿದರು. ಕೊವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲಾಯಿತು.